ಶಿರಾಡಿ ಘಾಟ್ ನಲ್ಲಿ ದುರಂತ ; ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಸಾಫ್ಟ್‌ವೇರ್ ಉದ್ಯೋಗಿ ಸಾವು ! 

02-01-22 02:00 pm       Mangalore Correspondent   ಕರಾವಳಿ

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಗುಂಡ್ಯ ಬಳಿ ಇಂದು ಬೆಳಗ್ಗೆ ನಡೆದಿದೆ. 

ಪುತ್ತೂರು, ಜ.2 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಗುಂಡ್ಯ ಬಳಿ ಇಂದು ಬೆಳಗ್ಗೆ ನಡೆದಿದೆ. 

ಕಿನ್ನಿಗೋಳಿಯ ಪಾವಂಜೆ ನಿವಾಸಿ ಸುರೇಶ ನಾವಡ (43) ಮೃತರು. ಇವರು ಬೆಂಗಳೂರಿನಲ್ಲಿ ಐಬಿಎಂ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಕಳೆದ ಡಿ.23 ರಂದು ಪತ್ನಿ , ಮಕ್ಕಳೊಂದಿಗೆ ಊರಿಗೆ ಬಂದಿದ್ದರು. ತಾಯಿ ಮನೆಯಾದ ಪಾವಂಜೆಯಲ್ಲಿ ಮಕ್ಕಳೊಂದಿಗೆ ರಜೆ ಕಳೆದು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ, ಶಿರಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಏನೋ ಶಬ್ದ ಬಂತೆಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರು.

ಅಡ್ಡಹೊಳೆ ತಿರುವಿನ ಬಳಿ ಕಾರನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾಗಲೇ ಕಾರಿನ ಮೇಲೆ ರಸ್ತೆ ಬದಿಯಿದ್ದ ಮರ ಉರುಳಿ ಬಿದ್ದಿದೆ. ಕಾರನ್ನು ಪರಿಶೀಲನೆ ನಡೆಸುತ್ತಿದ್ದ ಸುರೇಶ್ ನಾವಡ ಮತ್ತು ಕಾರಿನ ಮೇಲೆ ಮರ ಬಿದ್ದಿದ್ದು ಸುರೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಐ ಟ್ವೆಂಟಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಒಳಗಿದ್ದ ಪತ್ನಿ ರಶ್ಮಿ ಸಿಕ್ವೇರಾ ಮತ್ತು ಇಬ್ಬರು ಮಕ್ಕಳಿಗೆ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.

A software engineer by professional died on the soot in Shiradi Ghat in Mangalore after a huge tree fell on him while he had parked his car to repair it. The deceased has been identified as Suresh Navada (43). Wife and two children were also said to be inside the car who are unhurt.