ಬ್ರೇಕಿಂಗ್ ನ್ಯೂಸ್
02-01-22 10:59 pm Mangalore Correspondent ಕರಾವಳಿ
ಮಂಗಳೂರು, ಜ.2 : ಆಡಿನ ಮರಿಯನ್ನು ರಕ್ಷಿಸಲು ಹೋಗಿ ಎರಡೂ ಕಾಲುಗಳನ್ನು ಕಳಕೊಂಡಿದ್ದ 21ರ ಹರೆಯದ ಯುವಕ ಕೊನೆಗೂ ಬದುಕಿ ಬರಲಿಲ್ಲ. ಕಾಲು ಕಳಕೊಂಡ ಬಳಿಕ ಮಾನಸಿಕವಾಗಿ ತೀವ್ರ ಆಘಾತ ಅನುಭವಿಸಿದ್ದ ಚೇತನ್ ಇಂದು ಕೊನೆಯುಸಿರು ಎಳೆದಿದ್ದಾರೆ.
ಕಳೆದ ಆಗಸ್ಟ್ ತಿಂಗಳ ಕೊನೆಯಲ್ಲಿ ಜೋಕಟ್ಟೆ ಬಳಿಯ ಅಂಗರಗುಂಡಿ ಎಂಬಲ್ಲಿ ದುರಂತ ನಡೆದಿತ್ತು. ತನ್ನ ಮನೆಯಿಂದ ಜೋಕಟ್ಟೆಯ ರೈಲ್ವೇ ಗೇಟನ್ನು ದಾಟಿಕೊಂಡು ಬಸ್ಸಿನ ನಿರ್ವಾಹಕನ ಕೆಲಸಕ್ಕೆ ಓಡುತ್ತಿದ್ದ ಚೇತನ್, ರೈಲು ಬರುತ್ತಿದ್ದ ಹಳಿಯಲ್ಲಿ ಆಡಿನ ಮರಿ ಇದ್ದುದನ್ನು ನೋಡಿ ಅದರ ರಕ್ಷಣೆಗೆ ಧಾವಿಸಿದ್ದರು. ಆಡಿನ ಮರಿಯನ್ನು ಹೊರಗೆಸೆದು ಹಳಿಯಿಂದ ಹೊರಬೀಳುವಷ್ಟರಲ್ಲಿ ರೈಲು ಆತನ ಎರಡೂ ಕಾಲುಗಳ ಮೇಲಿನಿಂದ ಸಾಗಿತ್ತು. ಕೂಡಲೇ ಕಾಲಿನ ಜೊತೆಯೇ ಮಂಗಳೂರಿನ ಎಜೆ ಆಸ್ಪತ್ರೆಗೆ ಚೇತನ್ ಅವರನ್ನು ದಾಖಲು ಮಾಡಲಾಗಿತ್ತು. ಆದರೆ ಕಾಲು ಜೋಡಣೆ ಸಾಧ್ಯವಾಗಿರಲಿಲ್ಲ.

ನಾಲ್ಕು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿತ್ತು. ಬಸ್ಸಿನ ಸಿಬಂದಿ, ಜೋಕಟ್ಟೆಯ ಯುವಕರು ಭಿಕ್ಷೆ ಎತ್ತಿ ಚೇತನ್ ಚಿಕಿತ್ಸೆಗಾಗಿ ಹಣ ಒಟ್ಟು ಮಾಡಿದ್ದರು. ನಡುವೆ ಸ್ವಲ್ಪ ಚೇತರಿಸಿಕೊಂಡಿದ್ದ ಚೇತನ್ ಒಮ್ಮೆ ಮನೆಗೂ ಬಂದಿದ್ದ. ಆನಂತರ ಮಾನಸಿಕವಾಗಿ ಕುಗ್ಗಿದ ಚೇತನ್ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜ.2ರಂದು ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು ತಂಗಿಯರನ್ನು ಹೊಂದಿದ್ದ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಚುರುಕಿನ ಹುಡುಗ ಚೇತನ್ ಅಗಲಿಕೆ ಸ್ಥಳೀಯ ಯುವಕರಲ್ಲಿ ಶೋಕ ಸಾಗರ ಸೃಷ್ಟಿಸಿದೆ.
ಜೋಕಟ್ಟೆ ; ರೈಲಿನಡಿಗೆ ಬೀಳುತ್ತಿದ್ದ ಆಡಿನ ಮರಿ ರಕ್ಷಿಸಲು ಹೋಗಿದ್ದ ಯುವಕ ತಂದುಕೊಂಡ ದುರಂತ !
Mangalore 21 year old bus conductor who saved goat from train accident dies at hospital after six months of suffering. Cheatan had lost both his legs in train accident after he went to save the goats on the track at Jokatte.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm