ಬ್ರೇಕಿಂಗ್ ನ್ಯೂಸ್
16-09-20 09:43 am Mangalore Reporter ಕರಾವಳಿ
ಮಂಗಳೂರು, ಸೆ.16: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ಹೆಚ್ಚಿದ್ದು, ಶಾಸಕ ಭರತ್ ಶೆಟ್ಟಿ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಮರಳು ಮಾಫಿಯಾದಲ್ಲಿ ಶಾಸಕರ ಕೈವಾಡ ಇರುವ ಶಂಕೆಯಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೈಕಂಪಾಡಿ, ತಣ್ನೀರುಬಾವಿ, ನಾಯರ್ ಕುದ್ರು, ಮೀನಕಳಿಯ, ಅಡ್ಯಾರ್, ಪಡೀಲ್, ಅದ್ಯಪಾಡಿ ಮೊದಲಾದೆಡೆ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಶಾಸಕರು ವೌನ ವಹಿಸಿದ್ದು ನೋಡಿದರೆ ಅವರ ಕೈವಾಡ ಇರುವ ಸಂದೇಹ ಮೂಡುತ್ತದೆ. ಈ ಬಗ್ಗೆ ಕಾಂಗ್ರೆಸ್ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಪಚ್ಚನಾಡಿ ಸಂತೋಷ ನಗರದಲ್ಲಿ ಕುಡಿಯುವ ನೀರು ಸಿಗದ ಸ್ಥಿತಿಯಿದೆ. ಕ್ಷೇತ್ರದ ಶಾಸಕರು ಹಾಗು ಕಾರ್ಪೋರೇಟರ್ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮನೆ ಕಟ್ಟಿದರೂ ಶಾಸಕರು ಚಕಾರ ಎತ್ತಿಲ್ಲ. ಕಾಂಗ್ರೆಸ್ ಮತ್ತು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕೆಲಸ ಸ್ಥಗಿತವಾಗಿದೆ ಎಂದರು.

ಆರ್ಥಿಕ ಕುಸಿತದಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಭಾಗಶಃ ಮುಚ್ಚಿವೆ. ಸಾವಿರಾರು ಜನ ಉದ್ಯೋಗ ಇಲ್ಲದಾಗಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಮೊಯ್ದಿನ್ ಬಾವ ಹೇಳಿದರು.
ಈ ವೇಳೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮನಪಾ ಸದಸ್ಯ ಅನಿಲ್, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಉಮೇಶ್ ದಂಡಕೇರಿ ಉಪಸ್ಥಿತರಿದ್ದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am