ಬ್ರೇಕಿಂಗ್ ನ್ಯೂಸ್
03-01-22 01:50 pm Mangaluru Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.3 : ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ಎಸ್ಪಿ ನೇತೃತ್ವದ ಅಧಿಕಾರಿಗಳ ತಂಡವು ಮನೆಯಲ್ಲಿ ಬಾಷಾ ಅವರ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ. ಬಾಷಾ ಅವರ ಮನೆಗೆ ಕಳೆದ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ, ಬಾಷಾ ಅವರ ಕಿರಿಯ ಪುತ್ರ ಅಮರ್ ಅಬ್ದುಲ್ ರೆಹಮಾನ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದರು. ಆ ಸಂದರ್ಭದಲ್ಲಿ ಬಾಷಾ ಅವರ ಇನ್ನೊಬ್ಬ ಪುತ್ರ ಅನಾಸ್ ಮದುವೆಯಾಗಿದ್ದ ದೀಪ್ತಿ ಮರಿಯಂ ಎಂಬವಳ ಬಗೆಗೂ ಸಂಶಯ ಕಂಡುಬಂದಿತ್ತು.


ಮರಿಯಂಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿ, ಕೊನೆಗೆ ಬಂಧನ ಮಾಡದೆ ತೆರಳಿದ್ದರು. ಆದರೆ ದೂರದಲ್ಲಿದ್ದುಕೊಂಡೇ ಆಕೆಯ ಬಗ್ಗೆ ನಿಗಾ ಇಟ್ಟಿದ್ದರು ಎನ್ನಲಾಗಿದೆ. ಇದೀಗ ಮತ್ತೆ ಅದೇ ಮನೆಗೆ ಎನ್ಐಎ ತಂಡ ಆಗಮಿಸಿದ್ದು ದೀಪ್ತಿ ಮರಿಯಂಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ಬಾರಿ ಆಕೆಯನ್ನು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.


ಮೂಲತಃ ಕೊಡಗು ಮೂಲದ ದೀಪ್ತಿ ಹತ್ತು ವರ್ಷಗಳ ಹಿಂದೆ ದೇರಳಕಟ್ಟೆಯಲ್ಲಿ ಬಿಡಿಎಸ್ ಕಲಿಯುತ್ತಿದ್ದಾಗ ಬಿಎಂ ಬಾಷಾ ಪುತ್ರ ಅನಾಸ್ ಪರಿಚಯವಾಗಿ ಮದುವೆಯಾಗಿದ್ದಳು. ಆನಂತರ ಕಟ್ಟರ್ ಮುಸ್ಲಿಂ ಆಗಿ ಪರಿವರ್ತನೆಯಾಗಿದ್ದ ದೀಪ್ತಿ ತನ್ನ ಹೆಸರನ್ನು ಮರಿಯಂ ಎಂದು ಬದಲಿಸಿಕೊಂಡಿದ್ದಳು. ಅಲ್ಲದೆ, ಉಗ್ರವಾದಿ ಗುಂಪು ಐಸಿಸ್ ಸಂಪರ್ಕ ಪಡೆದಿದ್ದು ಮಂಗಳೂರಿನಲ್ಲಿದ್ದೇ ಜಮ್ಮು ಕಾಶ್ಮೀರದ ಲಿಂಕ್ ಹೊಂದಿದ್ದಳು ಎನ್ನಲಾಗಿತ್ತು. ಐಸಿಸ್ ನೆಟ್ವರ್ಕ್ ಗೆ ಯುವಕರನ್ನು ಸೇರಿಸುವ ಜಾಲದಲ್ಲಿ ಈಕೆಯೂ ಇದ್ದಾಳೆ ಎನ್ನುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸಿದ್ದರು.
Mangalore NIA Raids house of former MLA BM Idinabba for the second time in Ullal, chances of arresting Deepthi Marla. In the last raid Basha son Ammar was arrested on the charges of having links with ISIS. Deepthi who is said to be a Hindu was converted to Islam and was actively involved with ISIS activities supporting them online.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm