ಬ್ರೇಕಿಂಗ್ ನ್ಯೂಸ್
03-01-22 01:50 pm Mangaluru Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.3 : ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ಎಸ್ಪಿ ನೇತೃತ್ವದ ಅಧಿಕಾರಿಗಳ ತಂಡವು ಮನೆಯಲ್ಲಿ ಬಾಷಾ ಅವರ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ. ಬಾಷಾ ಅವರ ಮನೆಗೆ ಕಳೆದ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ, ಬಾಷಾ ಅವರ ಕಿರಿಯ ಪುತ್ರ ಅಮರ್ ಅಬ್ದುಲ್ ರೆಹಮಾನ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದರು. ಆ ಸಂದರ್ಭದಲ್ಲಿ ಬಾಷಾ ಅವರ ಇನ್ನೊಬ್ಬ ಪುತ್ರ ಅನಾಸ್ ಮದುವೆಯಾಗಿದ್ದ ದೀಪ್ತಿ ಮರಿಯಂ ಎಂಬವಳ ಬಗೆಗೂ ಸಂಶಯ ಕಂಡುಬಂದಿತ್ತು.


ಮರಿಯಂಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿ, ಕೊನೆಗೆ ಬಂಧನ ಮಾಡದೆ ತೆರಳಿದ್ದರು. ಆದರೆ ದೂರದಲ್ಲಿದ್ದುಕೊಂಡೇ ಆಕೆಯ ಬಗ್ಗೆ ನಿಗಾ ಇಟ್ಟಿದ್ದರು ಎನ್ನಲಾಗಿದೆ. ಇದೀಗ ಮತ್ತೆ ಅದೇ ಮನೆಗೆ ಎನ್ಐಎ ತಂಡ ಆಗಮಿಸಿದ್ದು ದೀಪ್ತಿ ಮರಿಯಂಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ಬಾರಿ ಆಕೆಯನ್ನು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.


ಮೂಲತಃ ಕೊಡಗು ಮೂಲದ ದೀಪ್ತಿ ಹತ್ತು ವರ್ಷಗಳ ಹಿಂದೆ ದೇರಳಕಟ್ಟೆಯಲ್ಲಿ ಬಿಡಿಎಸ್ ಕಲಿಯುತ್ತಿದ್ದಾಗ ಬಿಎಂ ಬಾಷಾ ಪುತ್ರ ಅನಾಸ್ ಪರಿಚಯವಾಗಿ ಮದುವೆಯಾಗಿದ್ದಳು. ಆನಂತರ ಕಟ್ಟರ್ ಮುಸ್ಲಿಂ ಆಗಿ ಪರಿವರ್ತನೆಯಾಗಿದ್ದ ದೀಪ್ತಿ ತನ್ನ ಹೆಸರನ್ನು ಮರಿಯಂ ಎಂದು ಬದಲಿಸಿಕೊಂಡಿದ್ದಳು. ಅಲ್ಲದೆ, ಉಗ್ರವಾದಿ ಗುಂಪು ಐಸಿಸ್ ಸಂಪರ್ಕ ಪಡೆದಿದ್ದು ಮಂಗಳೂರಿನಲ್ಲಿದ್ದೇ ಜಮ್ಮು ಕಾಶ್ಮೀರದ ಲಿಂಕ್ ಹೊಂದಿದ್ದಳು ಎನ್ನಲಾಗಿತ್ತು. ಐಸಿಸ್ ನೆಟ್ವರ್ಕ್ ಗೆ ಯುವಕರನ್ನು ಸೇರಿಸುವ ಜಾಲದಲ್ಲಿ ಈಕೆಯೂ ಇದ್ದಾಳೆ ಎನ್ನುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸಿದ್ದರು.
Mangalore NIA Raids house of former MLA BM Idinabba for the second time in Ullal, chances of arresting Deepthi Marla. In the last raid Basha son Ammar was arrested on the charges of having links with ISIS. Deepthi who is said to be a Hindu was converted to Islam and was actively involved with ISIS activities supporting them online.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am