ಬ್ರೇಕಿಂಗ್ ನ್ಯೂಸ್
04-01-22 11:00 pm Mangalore Correspondent ಕರಾವಳಿ
ಮಂಗಳೂರು, ಜ.4 : ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಓಮಿಕ್ರಾನ್ ಪ್ರಕರಣಗಳೇ ಹೆಚ್ಚು ಅನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 75 ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ದಿನಕ್ಕೆ ಸರಾಸರಿ ಆರು ಸಾವಿರ ಮಂದಿಯ ಟೆಸ್ಟಿಂಗ್ ಆಗುತ್ತಿದೆ. ಒಂದು ದಿನದ ಅಂತರದಲ್ಲಿ ಆರೂವರೆ ಸಾವಿರ ಮಂದಿಗೆ ಹೆಚ್ಚುವರಿಯಾಗಿ ಟೆಸ್ಟಿಂಗ್ ಆಗಿದ್ದು, ಈ ಪೈಕಿ 75 ಮಂದಿ ಪಾಸಿಟಿವ್ ಆಗಿದ್ದಾರೆ.
ಸೋಮವಾರದ ವರದಿಯಲ್ಲಿ 52 ಮಂದಿ ಪಾಸಿಟಿವ್ ಆಗಿದ್ದರು. ಸರಾಸರಿ 5 ಸಾವಿರ ಮಂದಿಯ ಟೆಸ್ಟಿಂಗ್ ಆಗಿತ್ತು. ಪಾಸಿಟಿವ್ ಕಂಡುಬಂದ ಶಾಲೆ, ಹಾಸ್ಟೆಲ್ ಗಳನ್ನು ಗುರಿಯಾಗಿಸಿ ಅಲ್ಲಿರುವ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಆದರೆ ಈಗ ಪಾಸಿಟಿವ್ ಆಗುತ್ತಿರುವ ಹೆಚ್ಚಿನ ಮಂದಿ ಓಮಿಕ್ರಾನ್ ಸೋಂಕಿತರೇ ಆಗಿದ್ದಾರೆ ಅನ್ನುವ ಮಾಹಿತಿಗಳಿವೆ. ಈ ಬಗ್ಗೆ ಜಿಲ್ಲಾಡಳಿತದಿಂದ ಪ್ರತಿ ದಿನವೂ ಪಾಸಿಟಿವ್ ಆದವರನ್ನು ಜಿನೋಮ್ ಸೀಕ್ವೆನ್ಸ್ ಟೆಸ್ಟ್ ಮಾಡಲಾಗುತ್ತಿದೆ. ಇದರ ವರದಿಯನ್ನು ಜಿಲ್ಲಾಡಳಿತ ಬಹಿರಂಗ ಪಡಿಸುತ್ತಿಲ್ಲ. ಹೆಚ್ಚಿನವರು ಓಮಿಕ್ರಾನ್ ಪಾಸಿಟಿವ್ ಆಗುತ್ತಿದ್ದಾರೆ ಅನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ. ಶೀತ, ನೆಗಡಿ ಪ್ರಕರಣಗಳಲ್ಲಿ ಹೆಚ್ಚಿನ ಮಂದಿ ಪರೀಕ್ಷೆಗೆ ಒಳಪಡುತ್ತಿಲ್ಲ. ಇಂಥವರು ಕೂಡ ಕೊರೊನಾ ಪಾಸಿಟಿವ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ರಾಜ್ಯದಲ್ಲಿ ಮಂಗಳವಾರದ ವರದಿಯಲ್ಲಿ 2400ಕ್ಕೂ ಹೆಚ್ಚು ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಹೀಗಾಗಿ ಸೋಂಕು ಹರಡುವುದನ್ನು ತಪ್ಪಿಸಲು ಲಾಕ್ಡೌನ್ ಮಾದರಿಯ ನಿರ್ಬಂಧ ಹೇರಲು ರಾಜ್ಯ ಸರಕಾರ ಮುಂದಾಗಿದೆ. ಓಮಿಕ್ರಾನ್ ಸೋಂಕು ವೇಗವಾಗಿ ಹರಡುವುದರಿಂದ ಕೊರೊನಾ ಮತ್ತೆ ಹೆಚ್ಚುತ್ತಿದೆ ಎನ್ನಲಾಗುತ್ತಿದೆ.
Spike in Covid cases in Mangalore day by day most tested with Omicron says Helath department officials.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm