ಬ್ರೇಕಿಂಗ್ ನ್ಯೂಸ್
04-01-22 11:00 pm Mangalore Correspondent ಕರಾವಳಿ
ಮಂಗಳೂರು, ಜ.4 : ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಓಮಿಕ್ರಾನ್ ಪ್ರಕರಣಗಳೇ ಹೆಚ್ಚು ಅನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 75 ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ದಿನಕ್ಕೆ ಸರಾಸರಿ ಆರು ಸಾವಿರ ಮಂದಿಯ ಟೆಸ್ಟಿಂಗ್ ಆಗುತ್ತಿದೆ. ಒಂದು ದಿನದ ಅಂತರದಲ್ಲಿ ಆರೂವರೆ ಸಾವಿರ ಮಂದಿಗೆ ಹೆಚ್ಚುವರಿಯಾಗಿ ಟೆಸ್ಟಿಂಗ್ ಆಗಿದ್ದು, ಈ ಪೈಕಿ 75 ಮಂದಿ ಪಾಸಿಟಿವ್ ಆಗಿದ್ದಾರೆ.
ಸೋಮವಾರದ ವರದಿಯಲ್ಲಿ 52 ಮಂದಿ ಪಾಸಿಟಿವ್ ಆಗಿದ್ದರು. ಸರಾಸರಿ 5 ಸಾವಿರ ಮಂದಿಯ ಟೆಸ್ಟಿಂಗ್ ಆಗಿತ್ತು. ಪಾಸಿಟಿವ್ ಕಂಡುಬಂದ ಶಾಲೆ, ಹಾಸ್ಟೆಲ್ ಗಳನ್ನು ಗುರಿಯಾಗಿಸಿ ಅಲ್ಲಿರುವ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಆದರೆ ಈಗ ಪಾಸಿಟಿವ್ ಆಗುತ್ತಿರುವ ಹೆಚ್ಚಿನ ಮಂದಿ ಓಮಿಕ್ರಾನ್ ಸೋಂಕಿತರೇ ಆಗಿದ್ದಾರೆ ಅನ್ನುವ ಮಾಹಿತಿಗಳಿವೆ. ಈ ಬಗ್ಗೆ ಜಿಲ್ಲಾಡಳಿತದಿಂದ ಪ್ರತಿ ದಿನವೂ ಪಾಸಿಟಿವ್ ಆದವರನ್ನು ಜಿನೋಮ್ ಸೀಕ್ವೆನ್ಸ್ ಟೆಸ್ಟ್ ಮಾಡಲಾಗುತ್ತಿದೆ. ಇದರ ವರದಿಯನ್ನು ಜಿಲ್ಲಾಡಳಿತ ಬಹಿರಂಗ ಪಡಿಸುತ್ತಿಲ್ಲ. ಹೆಚ್ಚಿನವರು ಓಮಿಕ್ರಾನ್ ಪಾಸಿಟಿವ್ ಆಗುತ್ತಿದ್ದಾರೆ ಅನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ. ಶೀತ, ನೆಗಡಿ ಪ್ರಕರಣಗಳಲ್ಲಿ ಹೆಚ್ಚಿನ ಮಂದಿ ಪರೀಕ್ಷೆಗೆ ಒಳಪಡುತ್ತಿಲ್ಲ. ಇಂಥವರು ಕೂಡ ಕೊರೊನಾ ಪಾಸಿಟಿವ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ರಾಜ್ಯದಲ್ಲಿ ಮಂಗಳವಾರದ ವರದಿಯಲ್ಲಿ 2400ಕ್ಕೂ ಹೆಚ್ಚು ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಹೀಗಾಗಿ ಸೋಂಕು ಹರಡುವುದನ್ನು ತಪ್ಪಿಸಲು ಲಾಕ್ಡೌನ್ ಮಾದರಿಯ ನಿರ್ಬಂಧ ಹೇರಲು ರಾಜ್ಯ ಸರಕಾರ ಮುಂದಾಗಿದೆ. ಓಮಿಕ್ರಾನ್ ಸೋಂಕು ವೇಗವಾಗಿ ಹರಡುವುದರಿಂದ ಕೊರೊನಾ ಮತ್ತೆ ಹೆಚ್ಚುತ್ತಿದೆ ಎನ್ನಲಾಗುತ್ತಿದೆ.
Spike in Covid cases in Mangalore day by day most tested with Omicron says Helath department officials.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm