ಬ್ರೇಕಿಂಗ್ ನ್ಯೂಸ್
05-01-22 11:27 am Mangalore Correspondent ಕರಾವಳಿ
ಮಂಗಳೂರು, ಜ.5 : ಕಳ್ಳತನ ಪ್ರಕರಣದಲ್ಲಿ ಆರೋಪಿಯ ಪತ್ತೆಗೆ ತೆರಳಿದ್ದ ವೇಳೆ ಮೂಡುಬಿದ್ರೆ ಠಾಣೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ಸಂತೋಷ್ (36) ಮೃತರು. ಪ್ರಕರಣದಲ್ಲಿ ಕಾರ್ಯಾಚರಣೆ ನಿಮಿತ್ತ ಪೊಲೀಸ್ ತಂಡದ ಜೊತೆ ತೀರ್ಥಹಳ್ಳಿಗೆ ತೆರಳಿದ್ದರು. ತಂಡದ ಜೊತೆಗಿದ್ದ ವೇಳೆ ಮಂಗಳವಾರ ರಾತ್ರಿ 11 ಗಂಟೆ ವೇಳೆಗೆ ಸಂತೋಷ್ ಗೆ ಹೃದಯಾಘಾತ ಆಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂತೋಷ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿಯಾಗಿದ್ದು 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದರು. ಈ ಹಿಂದೆ ಬಜ್ಪೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಎರಡು ವರ್ಷದ ಮಗು ಹೊಂದಿದ್ದರು.
ಕಳವು ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಪೊಲೀಸರ ತಂಡ ಕಾರ್ಯಾಚರಣೆ ನಿರತರಾಗಿದ್ದರು. ತಂಡದಲ್ಲಿ ಇತರ ಇಬ್ಬರು ಸಿಬಂದಿ ಕೂಡ ಇದ್ದರು. ಆರೋಪಿಯನ್ನು ಬಂಧಿಸಲೆಂದು ಮಂಗಳವಾರ ರಾತ್ರಿ ವೇಳೆ ರಸ್ತೆ ಮಧ್ಯೆ ಹೊಂಚು ಹಾಕಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ತಂಡಕ್ಕೆ ಹಿಂತಿರುಗಿ ಬರುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೂ ಮೊದಲೇ ಪೊಲೀಸ್ ತಂಡಕ್ಕೆ ಆಘಾತ ಎದುರಾಗಿದೆ.
Santhosh, who was working as a head constable in a police station at Moodbidri Police station died of a heart attack while on duty to arrest a criminal on Tuesday January 4. Santhosh had been to Thirthahalli. He suffered cardiac arrest on Tuesday night.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm