ಬ್ರೇಕಿಂಗ್ ನ್ಯೂಸ್
05-01-22 11:27 am Mangalore Correspondent ಕರಾವಳಿ
ಮಂಗಳೂರು, ಜ.5 : ಕಳ್ಳತನ ಪ್ರಕರಣದಲ್ಲಿ ಆರೋಪಿಯ ಪತ್ತೆಗೆ ತೆರಳಿದ್ದ ವೇಳೆ ಮೂಡುಬಿದ್ರೆ ಠಾಣೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ಸಂತೋಷ್ (36) ಮೃತರು. ಪ್ರಕರಣದಲ್ಲಿ ಕಾರ್ಯಾಚರಣೆ ನಿಮಿತ್ತ ಪೊಲೀಸ್ ತಂಡದ ಜೊತೆ ತೀರ್ಥಹಳ್ಳಿಗೆ ತೆರಳಿದ್ದರು. ತಂಡದ ಜೊತೆಗಿದ್ದ ವೇಳೆ ಮಂಗಳವಾರ ರಾತ್ರಿ 11 ಗಂಟೆ ವೇಳೆಗೆ ಸಂತೋಷ್ ಗೆ ಹೃದಯಾಘಾತ ಆಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂತೋಷ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿಯಾಗಿದ್ದು 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದರು. ಈ ಹಿಂದೆ ಬಜ್ಪೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಎರಡು ವರ್ಷದ ಮಗು ಹೊಂದಿದ್ದರು.
ಕಳವು ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಪೊಲೀಸರ ತಂಡ ಕಾರ್ಯಾಚರಣೆ ನಿರತರಾಗಿದ್ದರು. ತಂಡದಲ್ಲಿ ಇತರ ಇಬ್ಬರು ಸಿಬಂದಿ ಕೂಡ ಇದ್ದರು. ಆರೋಪಿಯನ್ನು ಬಂಧಿಸಲೆಂದು ಮಂಗಳವಾರ ರಾತ್ರಿ ವೇಳೆ ರಸ್ತೆ ಮಧ್ಯೆ ಹೊಂಚು ಹಾಕಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ತಂಡಕ್ಕೆ ಹಿಂತಿರುಗಿ ಬರುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೂ ಮೊದಲೇ ಪೊಲೀಸ್ ತಂಡಕ್ಕೆ ಆಘಾತ ಎದುರಾಗಿದೆ.
Santhosh, who was working as a head constable in a police station at Moodbidri Police station died of a heart attack while on duty to arrest a criminal on Tuesday January 4. Santhosh had been to Thirthahalli. He suffered cardiac arrest on Tuesday night.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 10:43 pm
Mangalore Correspondent
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm