ಬ್ರೇಕಿಂಗ್ ನ್ಯೂಸ್
05-01-22 01:39 pm Mangalore Correspondent ಕರಾವಳಿ
ಮಂಗಳೂರು, ಜ.4 : ಕಳೆದ ಅಕ್ಟೋಬರ್ ತಿಂಗಳಲ್ಲಿ ಕೌಟುಂಬಿಕ ಕಲಹದಿಂದ ಮನ ನೊಂದು ಬೇರ್ಪಟ್ಟಿದ್ದ ಸತಿ-ಪತಿ ಹಾಗೂ ಮಕ್ಕಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಲ್ಲಿ ಮತ್ತೆ ಒಂದಾಗಿದ್ದಾರೆ.
ಕೌಟುಂಬಿಕ ಸಮಸ್ಯೆಗಳಿಂದ ಮನನೊಂದು ಬೇರೆಯಾಗಿದ್ದ ನಾರಾಯಣ್ (48) (ಹೆಸರು ಬದಲಿಸಲಾಗಿದೆ) ಹಾಗೂ ಸರಳಾ (46) (ಹೆಸರು ಬದಲಾಯಿಸಲಾಗಿದೆ) ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನಡೆಸಿದ ಕೌನ್ಸೆಲಿಂಗ್ನಲ್ಲಿ ಸಂಸಾರದ ಜವಾಬ್ದಾರಿ ಅರಿತು ಮತ್ತೆ ಸತಿ-ಪತಿಯಾಗಲು ಒಪ್ಪಿದ್ದಾರೆ.
ದಂಪತಿ ಮಂಗಳೂರಿನ ಮರಕಡದ ನಿವಾಸಿಗಳಾಗಿದ್ದು ಕೌಟುಂಬಿಕ ಕಲಹದಿಂದ ನೊಂದು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದರು. ನಾರಾಯಣ್ ಬಿ ಫಾರ್ಮ್ ಓದಿಕೊಂಡು ಮರಕಡದಲ್ಲಿ ಮೆಡಿಕಲ್ ಶಾಪ್ ಹೊಂದಿದ್ದರು. ಅದರ ಪಕ್ಕದಲ್ಲೇ ಆಯುರ್ವೇದಿಕ್ ಕ್ಲಿನಿಕ್ ನಡೆಸುತ್ತಿದ್ದ ಪತ್ನಿ ಸರಳಾ ತಾನು ದುಡಿದ ಹಣವನ್ನು ಇಬ್ಬರು ಮಕ್ಕಳ ಹೆಸರಿನಲ್ಲಿ ಫಿಕ್ಸೆಡ್ ಡಿಪಾಸಿಟ್ ಇರಿಸಿದ್ದರು. ಕೌಟುಂಬಿಕ ಜೀವನದಲ್ಲಿ ಏರ್ಪಟ್ಟ ಘರ್ಷಣೆಗಳಿಂದಾಗಿ ಇಬ್ಬರ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿತ್ತು. ಇದರಿಂದ ಕಠಿಣ ನಿರ್ಧಾರ ಕೈಗೊಂಡ ಪತಿ - ಪತ್ನಿ ಪರಸ್ಪರ ದೂರವಾಗಲು ನಿರ್ಧರಿಸಿದ್ದರು. ಸರಳಾ ಪತಿಯಿಂದ ಪ್ರತ್ಯೇಕವಾಗಿ ಉಡುಪಿ ಜಿಲ್ಲೆಯ ಸಿದ್ಧಾಪುರದಲ್ಲಿ ಮಕ್ಕಳೊಂದಿಗೆ ವಾಸವಿದ್ದರು. ಈ ನಡುವೆ, ಜೀವನ ನಿರ್ವಹಣೆ, ಮಕ್ಕಳ ಭವಿಷ್ಯ ಹಾಗೂ ಅವರ ಶಿಕ್ಷಣಕ್ಕೆ ದಾರಿ ತೋರುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಶೀಲಿಸಿದ ಪ್ರಾಧಿಕಾರವು ನಾರಾಯಣ್ ಹಾಗೂ ಸರಳಾ ಅವರನ್ನು ಮಂಗಳೂರಿನ ನ್ಯಾಯಾಲಯದ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಗೆ ಕರೆದು, ಅಲ್ಲಿ ಅವರಿಗೆ ನಾಲ್ಕು ಬಾರಿ ಕೌನ್ಸಲಿಂಗ್ಗೆ ಒಳಪಡಿಸಿತ್ತು. ಈ ಸಂದರ್ಭದಲ್ಲಿ ಪತಿ- ಪತ್ನಿ ಇಬ್ಬರೂ ಒಟ್ಟಿಗೆ ಬಾಳುವಂತೆ ಸಲಹೆ ನೀಡಿ, ಮನಃ ಪರಿವರ್ತನೆಗೆ ಸೂಚಿಸಲಾಯಿತು. ನೆಮ್ಮದಿಯ ಜೀವನಕ್ಕಾಗಿ ಇರುವ ದಾರಿಗಳು, ಸೌಲಭ್ಯಗಳು, ಇಬ್ಬರು ಹೆಣ್ಣು ಮಕ್ಕಳ ಭವಿಷ್ಯ ಹಾಗೂ ಅವರ ಶಿಕ್ಷಣ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ತಿಳಿಸಿಕೊಡಲಾಗಿತ್ತು. ಕೌನ್ಸಲಿಂಗ್ ಇಬ್ಬರ ಮೇಲೂ ಪರಿಣಾಮ ಬೀರಿದ್ದು, ವಿವಾಹ ವಾರ್ಷಿಕೋತ್ಸವವಾದ ಜ.4 (ಮಂಗಳವಾರ) ಪರಿತ್ಯಕ್ತರಾಗಿದ್ದ ಇಬ್ಬರೂ ಮತ್ತೆ ಕೈಹಿಡಿದು ಅನ್ಯೋನ್ಯವಾಗಿ ಜೀವನ ಸಾಗಿಸಲು ಮುಂದಾಗಿದ್ದಾರೆ.
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮುರಲೀಧರ ಪೈ ಬಿ. ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ಈ ದಂಪತಿಗೆ ಪರಸ್ಪರ ಕೌನ್ಸೆಲಿಂಗ್ ನಡೆಸಿ, ಬೇರೆಯಾಗಿದ್ದ ಪತಿ-ಪತ್ನಿಯನ್ನು ಪ್ರಕರಣ ದಾಖಲಾದ ಅತಿ ಕಡಿಮೆ ಅವಧಿಯಲ್ಲಿ ಒಂದುಗೂಡಿಸಿದ್ದಾರೆ.
A couple which was under separation due to family issues since October 2021, were reunited due to the intervention of District Legal Services Authority on Tuesday, January 4, 2022. Narayan (48) (name changed) and Sarala (46) (name changed) are the estranged couple brought together again by the efforts of the authority. Both are residents of Marakada in the city. They had decided to separate due to some differences between them.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm