ಬ್ರೇಕಿಂಗ್ ನ್ಯೂಸ್
05-01-22 08:38 pm HK Desk news ಕರಾವಳಿ
ಸುಬ್ರಹ್ಮಣ್ಯ, ಜ.5 : ಓಮಿಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಸೂಚನೆಯಂತೆ ಎಲ್ಲ ರೀತಿಯ ಸೇವೆಗಳನ್ನು ರದ್ದುಪಡಿಸಲಾಗಿದೆ. ಜ.6 ರಿಂದಲೇ ಈ ಆದೇಶ ಜಾರಿಗೆ ಬರಲಿದ್ದು ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಭಾನುವಾರ ದರುಶನವೂ ಇಲ್ಲ !
ಇದಲ್ಲದೆ, ದೇವರ ದರ್ಶನಕ್ಕೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ದೇವರ ದರ್ಶನಕ್ಕೂ ಅವಕಾಶ ಇರುವುದಿಲ್ಲ. ಉಳಿದ ದಿನಗಳಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮೊದಲಾದ ಕೋವಿಡ್ 19 ನಿಯಂತ್ರಣದ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನ ಪಡೆಯಬಹುದು. ಶ್ರೀ ದೇವಳದಲ್ಲಿ ಸಂಬಂಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜೆ ಎಂದಿನಂತೆ ನಡೆಯುವುದು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.
ಕೋವಿಡ್ ನಿಯಮ ಪಾಲಿಸಿ ಸಹಕರಿಸಿ
ದೇಗುಲದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ದೇವಳದ ಹೊರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ಭಕ್ತರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತಾದಿಗಳು ಸರಕಾರ ಮತ್ತು ಜಿಲ್ಲಾಡಳಿತ ರೂಪಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಸಹಕರಿಸಬೇಕು ಎಂದವರು ವಿನಂತಿಸಿದ್ದಾರೆ.
Mangalore Rise in Omicron cases all services at Kukke Shri Subramanya Temple to be closed, only entry for darshan for devotees allowed.
13-05-24 04:34 pm
Bangalore Correspondent
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಅಸಮಾಧ...
12-05-24 07:08 pm
Congress MLA Kadalur Uday gowda vs Kumaraswam...
12-05-24 03:45 pm
13-05-24 03:53 pm
HK News Desk
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
13-05-24 02:27 pm
Mangalore Correspondent
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
Kadaba illegal sand raid, Mangalore crime: ಕಡ...
12-05-24 04:34 pm
Mangalore University: ಮಂಗಳೂರು ವಿವಿ ಕಾಲೇಜಿನಲ್ಲ...
12-05-24 03:04 pm
13-05-24 04:10 pm
Udupi Correspondent
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm
Kalaburgi youth murdered: ಕಲಬುರಗಿ ; ಕಾಂಗ್ರೆಸ್...
10-05-24 02:04 pm