ಬ್ರೇಕಿಂಗ್ ನ್ಯೂಸ್
05-01-22 08:38 pm HK Desk news ಕರಾವಳಿ
ಸುಬ್ರಹ್ಮಣ್ಯ, ಜ.5 : ಓಮಿಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಸೂಚನೆಯಂತೆ ಎಲ್ಲ ರೀತಿಯ ಸೇವೆಗಳನ್ನು ರದ್ದುಪಡಿಸಲಾಗಿದೆ. ಜ.6 ರಿಂದಲೇ ಈ ಆದೇಶ ಜಾರಿಗೆ ಬರಲಿದ್ದು ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಭಾನುವಾರ ದರುಶನವೂ ಇಲ್ಲ !
ಇದಲ್ಲದೆ, ದೇವರ ದರ್ಶನಕ್ಕೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ದೇವರ ದರ್ಶನಕ್ಕೂ ಅವಕಾಶ ಇರುವುದಿಲ್ಲ. ಉಳಿದ ದಿನಗಳಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮೊದಲಾದ ಕೋವಿಡ್ 19 ನಿಯಂತ್ರಣದ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನ ಪಡೆಯಬಹುದು. ಶ್ರೀ ದೇವಳದಲ್ಲಿ ಸಂಬಂಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜೆ ಎಂದಿನಂತೆ ನಡೆಯುವುದು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ಸಹಕರಿಸಿ
ದೇಗುಲದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ದೇವಳದ ಹೊರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ಭಕ್ತರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತಾದಿಗಳು ಸರಕಾರ ಮತ್ತು ಜಿಲ್ಲಾಡಳಿತ ರೂಪಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಸಹಕರಿಸಬೇಕು ಎಂದವರು ವಿನಂತಿಸಿದ್ದಾರೆ.
Mangalore Rise in Omicron cases all services at Kukke Shri Subramanya Temple to be closed, only entry for darshan for devotees allowed.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm