ಬ್ರೇಕಿಂಗ್ ನ್ಯೂಸ್
05-01-22 08:38 pm HK Desk news ಕರಾವಳಿ
ಸುಬ್ರಹ್ಮಣ್ಯ, ಜ.5 : ಓಮಿಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಸೂಚನೆಯಂತೆ ಎಲ್ಲ ರೀತಿಯ ಸೇವೆಗಳನ್ನು ರದ್ದುಪಡಿಸಲಾಗಿದೆ. ಜ.6 ರಿಂದಲೇ ಈ ಆದೇಶ ಜಾರಿಗೆ ಬರಲಿದ್ದು ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಭಾನುವಾರ ದರುಶನವೂ ಇಲ್ಲ !
ಇದಲ್ಲದೆ, ದೇವರ ದರ್ಶನಕ್ಕೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ದೇವರ ದರ್ಶನಕ್ಕೂ ಅವಕಾಶ ಇರುವುದಿಲ್ಲ. ಉಳಿದ ದಿನಗಳಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮೊದಲಾದ ಕೋವಿಡ್ 19 ನಿಯಂತ್ರಣದ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನ ಪಡೆಯಬಹುದು. ಶ್ರೀ ದೇವಳದಲ್ಲಿ ಸಂಬಂಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜೆ ಎಂದಿನಂತೆ ನಡೆಯುವುದು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.
ಕೋವಿಡ್ ನಿಯಮ ಪಾಲಿಸಿ ಸಹಕರಿಸಿ
ದೇಗುಲದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ದೇವಳದ ಹೊರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ಭಕ್ತರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತಾದಿಗಳು ಸರಕಾರ ಮತ್ತು ಜಿಲ್ಲಾಡಳಿತ ರೂಪಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಸಹಕರಿಸಬೇಕು ಎಂದವರು ವಿನಂತಿಸಿದ್ದಾರೆ.
Mangalore Rise in Omicron cases all services at Kukke Shri Subramanya Temple to be closed, only entry for darshan for devotees allowed.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm