ಬ್ರೇಕಿಂಗ್ ನ್ಯೂಸ್
06-01-22 03:48 pm Mangalore Correspondent ಕರಾವಳಿ
ಮಂಗಳೂರು, ಜ.6 : ಓಮಿಕ್ರಾನ್ ಹೆಸರಲ್ಲಿ ರಾಜ್ಯ ಸರಕಾರ ವೀಕೆಂಡಲ್ಲಿ ಎರಡು ದಿನ ಕರ್ಫ್ಯೂ ವಿಧಿಸಿದೆ. ಅದರಂತೆ, ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ ವರೆಗೆ ಕರ್ಫ್ಯೂ ಇದ್ದು, ಜನರು ಹೊರಗೆ ಓಡಾಡುವಂತಿಲ್ಲ ಎಂದು ರಾಜ್ಯ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಡಳಿತ, ವೀಕೆಂಡ್ ಕರ್ಫ್ಯೂ ಇದ್ದರೂ ಬಸ್, ಸಾರಿಗೆ ವಾಹನಗಳು ಓಡಾಡಬಹುದು. ಅಗತ್ಯ ಸಾಮಗ್ರಿಗಳ ಅಂಗಡಿಯನ್ನು ತೆರೆದಿಡಬಹುದು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ಸಾರ್ವಜನಿಕರ ತುರ್ತು ಓಡಾಟಕ್ಕೆ ಅವಕಾಶ ನೀಡುವ ಸಲುವಾಗಿ ಸಾರಿಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಅಗತ್ಯ ಸಾಮಗ್ರಿಗಳ ಅಂಗಡಿ, ವ್ಯಾಪಾರ ಸಂಸ್ಥೆಗಳನ್ನೂ ತೆರೆದಿಡಲು ಅವಕಾಶ ಇದೆ. ಸಾರ್ವಜನಿಕರು ತಮ್ಮ ಮನೆಯ ಬಳಿಯಲ್ಲೇ ಆದಷ್ಟು ಅಂಗಡಿಗೆ ತೆರಳಬೇಕು. ಆಮೂಲಕ ಸಾರ್ವಜನಿಕ ಸಂಚಾರಕ್ಕೆ ನಿಯಂತ್ರಣ ಹೇರಿ, ವೈರಸ್ ಹರಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ವೀಕೆಂಡಲ್ಲಿ ಶಾಲೆ, ಕಾಲೇಜುಗಳಿಗೆ ಶಿಕ್ಷಣ ಸಂಸ್ಥೆಗಳು ರಜೆ ನೀಡಬೇಕು. ಪರೀಕ್ಷೆ ನಡೆಯುತ್ತಿದ್ದರೆ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ತೋರಿಸಿ ಸಂಚಾರ ನಡೆಸಬಹುದು. ಈಗಾಗ್ಲೇ ನಿಗದಿಯಾಗಿರುವ ಮದುವೆ ಇನ್ನಿತರ ಸಮಾರಂಭಗಳಿಗೆ ಅವಕಾಶ ಇರುತ್ತದೆ. ಆದರೆ ಸರಕಾರದ ಮಾರ್ಗಸೂಚಿಯಂತೆ 200 ಜನರಿಗೆ ಸೀಮಿತಗೊಳಿಸಬೇಕು ಎಂದಿದ್ದಾರೆ. ಅಲ್ಲದೆ, ಜನರು ಸ್ವಯಂಪ್ರೇರಿತರಾಗಿ ಕೋವಿಡ್ ವೈರಸ್ ಹರಡದಂತೆ ಜಾಗ್ರತೆ ವಹಿಸಬೇಕು. ಜನರು ಸ್ವಯಂ ಜಾಗೃತಿಯ ಮೂಲಕ ಲಾಕ್ಡೌನ್ ರೀತಿಯ ನಿರ್ಬಂಧ ಎದುರಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾಟಾಚಾರಕ್ಕೆ ವೀಕೆಂಡ್ ಕರ್ಫ್ಯೂ
ವೀಕೆಂಡ್ ಕರ್ಫ್ಯೂ ವಿಧಿಸಿ ಜನರ ಸಂಚಾರವನ್ನು ಎರಡು ದಿನ ನಿರ್ಬಂಧಿಸುವ ಉದ್ದೇಶ ರಾಜ್ಯ ಸರಕಾರದ್ದಾಗಿದ್ದರೂ, ಜಿಲ್ಲಾಡಳಿತ ಜನರ ಸಂಚಾರಕ್ಕೆ ಸಾರಿಗೆ ವಾಹನಗಳಿಗೆ ಅವಕಾಶ ಕೊಟ್ಟು ಅಂಗಡಿಗಳನ್ನು ತೆರೆದಿಟ್ಟು ಕಾಟಾಚಾರಕ್ಕೆ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಸರಕಾರಿ ಕಚೇರಿಯನ್ನು ತೆರೆದಿಟ್ಟು ಜನರ ಓಡಾಟಕ್ಕೆ ಅವಕಾಶ ನೀಡುವುದಾದರೆ, ಖಾಸಗಿ ಕಚೇರಿ, ವ್ಯಾಪಾರ ಸಂಸ್ಥೆಗಳನ್ನು ಮಾತ್ರ ನಿರ್ಬಂಧಿಸಿದ ಮಾತ್ರಕ್ಕೆ ವೈರಸ್ ಹರಡುವುದಕ್ಕೆ ಬ್ರೇಕ್ ಬೀಳುತ್ತಾ ಅನ್ನುವ ಪ್ರಶ್ನೆಗೆ ಉತ್ತರ ಇಲ್ಲ.
Private buses and stores opened in Mangalore weekend Curfew states DC Rajendra. As per the new guidelines, a weekend curfew will be implemented in the state from Friday 10:00 pm to Monday 5:00 am for the next two weeks.
13-05-24 09:17 pm
Bangalore Correspondent
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
13-05-24 07:56 pm
HK News Desk
ಬುರ್ಖಾ ಹಾಕೊಂಡು ಬಂದಿದ್ದ ಮುಸ್ಲಿಂ ಮತದಾರರಿಗೆ ನಿಮ...
13-05-24 03:53 pm
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
13-05-24 10:15 pm
Mangalore Correspondent
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm