ಬ್ರೇಕಿಂಗ್ ನ್ಯೂಸ್
07-01-22 02:35 pm Mangalore Correspondent ಕರಾವಳಿ
ಬಂಟ್ವಾಳ, ಜ.7 : ತುಳುನಾಡಿನ ಜನರು ಆರಾಧಿಸುವ ಕೊರಗಜ್ಜನ ಮಾದರಿಯಲ್ಲಿ ವೇಷ ತೊಟ್ಟು ಮದುಮಗನೊಬ್ಬ ಮುಸ್ಲಿಂ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಆರೋಪಿತರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆಯಲ್ಲಿ ಈ ಘಟನೆ ನಡೆದಿದೆ. ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿತ್ತು. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ಯುವಕರ ಗುಂಪು ಮದುಮಗನಿಗೆ ವಿಶಿಷ್ಟವಾಗಿ ಶೃಂಗರಿಸಿ, ಕರೆತಂದಿದ್ದರು.

ಆದರೆ ತಲೆಗೆ ಹಾಳೆಯ ಮುಂಡಾಸು, ಮುಖಕ್ಕೆ ಕಪ್ಪು ಮಸಿ ಹಾಕಿ, ಕುಣಿಯುತ್ತಾ ಬಂದಿದ್ದು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿದಾಡಿದ್ದಾರೆ. ಕೊರಗಜ್ಜನ ವೇಷದ ಮಾದರಿಯಲ್ಲಿ ಮುಖಕ್ಕೆ ಮಸಿ ಬಳಿದು ಕುಣಿದಿದ್ದು ಕೊರಗಜ್ಜ ದೈವ ಮತ್ತು ಕೊರಗ ಸಮುದಾಯವನ್ನು ಅಣಕ ಮಾಡಿದಂತಾಗಿದೆ ಎನ್ನುವ ಮಾತು ಕೇಳಿಬಂದಿದೆ.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಜಾಲತಾಣಗಳಲ್ಲಿ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೆ ನವರಾತ್ರಿ ಸಂದರ್ಭದಲ್ಲಿ ಕೊರಗರ ವೇಷ ಹಾಕುವ ಪದ್ಧತಿ ಇತ್ತು. ಬಳಿಕ ಅದನ್ನು ಸಮುದಾಯದ ನಿಂದನೆ ಅನ್ನುವ ನೆಲೆಯಲ್ಲಿ ನಿಷೇಧಿಸಲಾಗಿತ್ತು.
Bantwal Muslim wedding celebration, insult Koragajja by wearing costume, video goes viral in Mangalore. The video is said to be recorded last night creating controversy among Hindus.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm