ಬ್ರೇಕಿಂಗ್ ನ್ಯೂಸ್
07-01-22 02:35 pm Mangalore Correspondent ಕರಾವಳಿ
ಬಂಟ್ವಾಳ, ಜ.7 : ತುಳುನಾಡಿನ ಜನರು ಆರಾಧಿಸುವ ಕೊರಗಜ್ಜನ ಮಾದರಿಯಲ್ಲಿ ವೇಷ ತೊಟ್ಟು ಮದುಮಗನೊಬ್ಬ ಮುಸ್ಲಿಂ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಆರೋಪಿತರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆಯಲ್ಲಿ ಈ ಘಟನೆ ನಡೆದಿದೆ. ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿತ್ತು. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ಯುವಕರ ಗುಂಪು ಮದುಮಗನಿಗೆ ವಿಶಿಷ್ಟವಾಗಿ ಶೃಂಗರಿಸಿ, ಕರೆತಂದಿದ್ದರು.
ಆದರೆ ತಲೆಗೆ ಹಾಳೆಯ ಮುಂಡಾಸು, ಮುಖಕ್ಕೆ ಕಪ್ಪು ಮಸಿ ಹಾಕಿ, ಕುಣಿಯುತ್ತಾ ಬಂದಿದ್ದು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿದಾಡಿದ್ದಾರೆ. ಕೊರಗಜ್ಜನ ವೇಷದ ಮಾದರಿಯಲ್ಲಿ ಮುಖಕ್ಕೆ ಮಸಿ ಬಳಿದು ಕುಣಿದಿದ್ದು ಕೊರಗಜ್ಜ ದೈವ ಮತ್ತು ಕೊರಗ ಸಮುದಾಯವನ್ನು ಅಣಕ ಮಾಡಿದಂತಾಗಿದೆ ಎನ್ನುವ ಮಾತು ಕೇಳಿಬಂದಿದೆ.
ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಜಾಲತಾಣಗಳಲ್ಲಿ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೆ ನವರಾತ್ರಿ ಸಂದರ್ಭದಲ್ಲಿ ಕೊರಗರ ವೇಷ ಹಾಕುವ ಪದ್ಧತಿ ಇತ್ತು. ಬಳಿಕ ಅದನ್ನು ಸಮುದಾಯದ ನಿಂದನೆ ಅನ್ನುವ ನೆಲೆಯಲ್ಲಿ ನಿಷೇಧಿಸಲಾಗಿತ್ತು.
Bantwal Muslim wedding celebration, insult Koragajja by wearing costume, video goes viral in Mangalore. The video is said to be recorded last night creating controversy among Hindus.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm