ಬ್ರೇಕಿಂಗ್ ನ್ಯೂಸ್
10-01-22 04:50 pm Mangalore Correspondent ಕರಾವಳಿ
ಮಂಗಳೂರು, ಜ.10 : 52,529 ಆರೋಗ್ಯ ಕಾರ್ಯಕರ್ತರು, 15,924 ಮಂಚೂಣಿ ಕಾರ್ಯಕರ್ತರು ಹಾಗೂ 2,69,000 ಅರವತ್ತು ವರ್ಷ ಮೇಲ್ಪಟ್ಟವರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 3,37,447 ಅರ್ಹ ಫಲಾನುಭವಿಗಳ ಪೈಕಿ 40 ಸಾವಿರ ಜನರಿಗೆ ಇಂದು ಬೂಸ್ಟರ್ ಡೋಸ್ ನೀಡಲಾಗುತ್ತಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು.
ಸೋಮವಾರ ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಕೋವಿಡ್ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.



ಅರ್ಹ ಫಲಾನುಭವಿಗಳು ಬೇಗನೆ ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು, ಸರ್ಕಾರದಿಂದ ಈಗಾಗಲೇ ಅದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆರೋಗ್ಯ ಹಾಗೂ ಜೀವರಕ್ಷಣೆ ಇದರಿಂದ ಸಾಧ್ಯವಾಗಲಿದೆ, ಕೋವಿಡ್ ಸೋಂಕಿನ ನಿಯಂತ್ರಣದ ಹಿತದೃಷ್ಟಿಯಿಂದ ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು. ಕೋವಿಡ್ ಕುರಿತಂತೆ ನಾಗರಿಕರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಮುಖ್ಯವಾಗಿ ಅಜಾಗರೂಕರಾಗಿರಬಾರದು ಎಂದು ಹೇಳಿದರು.



ಲಾಕ್ಡೌನ್ ಸಂಬಂಧಿಸಿ ಜನರಲ್ಲಿ ಗೊಂದಲಗಳಿವೆ, ಸೋಂಕು ನಿಯಂತ್ರಿಸುವಲ್ಲಿ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದ್ದಲ್ಲಿ ಅನುಕೂಲ ಎಂಬ ಕಾರಣದಿಂದ ವಾರಂತ್ಯ ಕರ್ಫ್ಯೂ ವಿಧಿಸಲಾಗಿದೆ. ಜನ ಎಚ್ಚರಿಕೆ ವಹಿಸಿದರೆ ಲಾಕ್ಡೌನ್ ಹೇರುವ ಪ್ರಮೇಯ ಉದ್ಬವಿಸುವುದಿಲ್ಲ ಎಂದು ಅವರು ಹೇಳಿದರು.



ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮೇಯರ್ ಪ್ರೇಮಾನಂದ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
Booster dose vaccination drive began in the twin districts on was inaugurated Monday January 10.The vaccination drive was inaugurated in the presence of minister Angara at the Wenlock hospital in the city. Mayor Premananda Shetty, deputy commissioner Dr Rajendra K V, District Heath and Family Welfare officer Dr Kishore Kumar were present.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm