ಬ್ರೇಕಿಂಗ್ ನ್ಯೂಸ್
16-01-22 11:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.16 : ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ಆರಂಭಗೊಂಡಿದೆ. ದೇವಸ್ಥಾನದ ಮುಂಭಾಗದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಶೇಷ ರೀತಿಯ ಯಾಗ ನಡೆಸಲಾಗಿದೆ.
ಯಾಗ ಕರ್ತೃಗಳಾಗಿ ಸ್ವತಃ ಶಾಸಕ ಹರೀಶ್ ಪೂಂಜಾ ದಂಪತಿ ಕುಳಿತುಕೊಂಡಿದ್ದು, ಸಂಜೆ 4.30ಕ್ಕೆ ಯಾಗ ಪೂರ್ವ ವಿಧಿ ಕರ್ಮಗಳು ಆರಂಭಗೊಂಡಿದೆ. 80 ಜನ ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದಾರೆ. ಪ್ರಧಾನಿ ಮೋದಿ ಹೆಸರಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಈ ವೇಳೆ, ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಮಾಡಲಾಗಿದೆ. ಸಂಜೆ 4ರಿಂದ ಆರಂಭಗೊಂಡ ಯಾಗ ಕರ್ಮಾದಿಗಳು ರಾತ್ರಿ 9 ಗಂಟೆ ವರೆಗೆ ನಡೆದಿದ್ದು, ಪೂರ್ಣಾಹುತಿ ನಡೆದಿದೆ. ಭಾನುವಾರದ ಯಾಗ ಕಾರ್ಯದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದಾರೆ.


ಮೃತ್ಯುಂಜಯ ಯಾಗದ ಪ್ರಧಾನ ಯಜ್ಞಾದಿ ಕರ್ಮಗಳು ಸೋಮವಾರ ಬೆಳಗ್ಗೆ ನಡೆಯಲಿದೆ. ಬೆಳಗ್ಗೆ ಏಳು ಗಂಟೆಯಿಂದ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ. ಏಳು ಕುಂಡಗಳಿಗೆ ಏಳು ಹೆಸರಿಡಲಾಗಿದ್ದು, ಸದ್ಯೋಜಾತ ಕುಂಡ, ವಾಮದೇವ ಕುಂಡ, ಅಘೋರ ಕುಂಡ, ತತ್ಪುರುಷ ಕುಂಡ, ಈಶಾನ ಕುಂಡ, ತ್ರಯಂಬಕ ಕುಂಡ, ಮೃತ್ಯುಂಜಯ ಕುಂಡದಲ್ಲಿ ಯಾಗ ಹೋಮ ನಡೆಯಲಿದೆ.


ಕೆ.ಸಿ.ನಾಗೇಂದ್ರ ಭಾರದ್ವಾಜ್ ಮಾರ್ಗದರ್ಶನದಲ್ಲಿ ಯಾಗಾದಿ ಕಾರ್ಯಗಳು ನಡೆಯಲಿದ್ದು, ಎಲ್ಲವನ್ನೂ ಪ್ರಧಾನಿ ಮೋದಿ ಹೆಸರಲ್ಲಿ ಮಾಡಲಾಗುತ್ತಿದೆ. ಸೋಮವಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಚಿವ ಕೆ.ಎಸ್.ಈಶ್ವರಪ್ಪ, ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡ ಪಾಲ್ಗೊಳ್ಳುವುದು ಖಾತ್ರಿಯಾಗಿತ್ತು. ಅವರಿಗೆ ಕೊರೊನಾ ಆಗಿರುವುದರಿಂದ ಪಾಲ್ಗೊಳ್ಳುತ್ತಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
Special Yaga for increase in life span of Modi held at Dharmasthala temple by Harish Poonja.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm