ಬ್ರೇಕಿಂಗ್ ನ್ಯೂಸ್
16-01-22 11:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.16 : ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ಆರಂಭಗೊಂಡಿದೆ. ದೇವಸ್ಥಾನದ ಮುಂಭಾಗದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಶೇಷ ರೀತಿಯ ಯಾಗ ನಡೆಸಲಾಗಿದೆ.
ಯಾಗ ಕರ್ತೃಗಳಾಗಿ ಸ್ವತಃ ಶಾಸಕ ಹರೀಶ್ ಪೂಂಜಾ ದಂಪತಿ ಕುಳಿತುಕೊಂಡಿದ್ದು, ಸಂಜೆ 4.30ಕ್ಕೆ ಯಾಗ ಪೂರ್ವ ವಿಧಿ ಕರ್ಮಗಳು ಆರಂಭಗೊಂಡಿದೆ. 80 ಜನ ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದಾರೆ. ಪ್ರಧಾನಿ ಮೋದಿ ಹೆಸರಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಈ ವೇಳೆ, ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಮಾಡಲಾಗಿದೆ. ಸಂಜೆ 4ರಿಂದ ಆರಂಭಗೊಂಡ ಯಾಗ ಕರ್ಮಾದಿಗಳು ರಾತ್ರಿ 9 ಗಂಟೆ ವರೆಗೆ ನಡೆದಿದ್ದು, ಪೂರ್ಣಾಹುತಿ ನಡೆದಿದೆ. ಭಾನುವಾರದ ಯಾಗ ಕಾರ್ಯದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದಾರೆ.


ಮೃತ್ಯುಂಜಯ ಯಾಗದ ಪ್ರಧಾನ ಯಜ್ಞಾದಿ ಕರ್ಮಗಳು ಸೋಮವಾರ ಬೆಳಗ್ಗೆ ನಡೆಯಲಿದೆ. ಬೆಳಗ್ಗೆ ಏಳು ಗಂಟೆಯಿಂದ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ. ಏಳು ಕುಂಡಗಳಿಗೆ ಏಳು ಹೆಸರಿಡಲಾಗಿದ್ದು, ಸದ್ಯೋಜಾತ ಕುಂಡ, ವಾಮದೇವ ಕುಂಡ, ಅಘೋರ ಕುಂಡ, ತತ್ಪುರುಷ ಕುಂಡ, ಈಶಾನ ಕುಂಡ, ತ್ರಯಂಬಕ ಕುಂಡ, ಮೃತ್ಯುಂಜಯ ಕುಂಡದಲ್ಲಿ ಯಾಗ ಹೋಮ ನಡೆಯಲಿದೆ.


ಕೆ.ಸಿ.ನಾಗೇಂದ್ರ ಭಾರದ್ವಾಜ್ ಮಾರ್ಗದರ್ಶನದಲ್ಲಿ ಯಾಗಾದಿ ಕಾರ್ಯಗಳು ನಡೆಯಲಿದ್ದು, ಎಲ್ಲವನ್ನೂ ಪ್ರಧಾನಿ ಮೋದಿ ಹೆಸರಲ್ಲಿ ಮಾಡಲಾಗುತ್ತಿದೆ. ಸೋಮವಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಚಿವ ಕೆ.ಎಸ್.ಈಶ್ವರಪ್ಪ, ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡ ಪಾಲ್ಗೊಳ್ಳುವುದು ಖಾತ್ರಿಯಾಗಿತ್ತು. ಅವರಿಗೆ ಕೊರೊನಾ ಆಗಿರುವುದರಿಂದ ಪಾಲ್ಗೊಳ್ಳುತ್ತಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
Special Yaga for increase in life span of Modi held at Dharmasthala temple by Harish Poonja.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm