ಬ್ರೇಕಿಂಗ್ ನ್ಯೂಸ್
16-01-22 11:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.16 : ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ಆರಂಭಗೊಂಡಿದೆ. ದೇವಸ್ಥಾನದ ಮುಂಭಾಗದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಶೇಷ ರೀತಿಯ ಯಾಗ ನಡೆಸಲಾಗಿದೆ.
ಯಾಗ ಕರ್ತೃಗಳಾಗಿ ಸ್ವತಃ ಶಾಸಕ ಹರೀಶ್ ಪೂಂಜಾ ದಂಪತಿ ಕುಳಿತುಕೊಂಡಿದ್ದು, ಸಂಜೆ 4.30ಕ್ಕೆ ಯಾಗ ಪೂರ್ವ ವಿಧಿ ಕರ್ಮಗಳು ಆರಂಭಗೊಂಡಿದೆ. 80 ಜನ ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದಾರೆ. ಪ್ರಧಾನಿ ಮೋದಿ ಹೆಸರಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಈ ವೇಳೆ, ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಮಾಡಲಾಗಿದೆ. ಸಂಜೆ 4ರಿಂದ ಆರಂಭಗೊಂಡ ಯಾಗ ಕರ್ಮಾದಿಗಳು ರಾತ್ರಿ 9 ಗಂಟೆ ವರೆಗೆ ನಡೆದಿದ್ದು, ಪೂರ್ಣಾಹುತಿ ನಡೆದಿದೆ. ಭಾನುವಾರದ ಯಾಗ ಕಾರ್ಯದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದಾರೆ.


ಮೃತ್ಯುಂಜಯ ಯಾಗದ ಪ್ರಧಾನ ಯಜ್ಞಾದಿ ಕರ್ಮಗಳು ಸೋಮವಾರ ಬೆಳಗ್ಗೆ ನಡೆಯಲಿದೆ. ಬೆಳಗ್ಗೆ ಏಳು ಗಂಟೆಯಿಂದ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ. ಏಳು ಕುಂಡಗಳಿಗೆ ಏಳು ಹೆಸರಿಡಲಾಗಿದ್ದು, ಸದ್ಯೋಜಾತ ಕುಂಡ, ವಾಮದೇವ ಕುಂಡ, ಅಘೋರ ಕುಂಡ, ತತ್ಪುರುಷ ಕುಂಡ, ಈಶಾನ ಕುಂಡ, ತ್ರಯಂಬಕ ಕುಂಡ, ಮೃತ್ಯುಂಜಯ ಕುಂಡದಲ್ಲಿ ಯಾಗ ಹೋಮ ನಡೆಯಲಿದೆ.


ಕೆ.ಸಿ.ನಾಗೇಂದ್ರ ಭಾರದ್ವಾಜ್ ಮಾರ್ಗದರ್ಶನದಲ್ಲಿ ಯಾಗಾದಿ ಕಾರ್ಯಗಳು ನಡೆಯಲಿದ್ದು, ಎಲ್ಲವನ್ನೂ ಪ್ರಧಾನಿ ಮೋದಿ ಹೆಸರಲ್ಲಿ ಮಾಡಲಾಗುತ್ತಿದೆ. ಸೋಮವಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಚಿವ ಕೆ.ಎಸ್.ಈಶ್ವರಪ್ಪ, ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡ ಪಾಲ್ಗೊಳ್ಳುವುದು ಖಾತ್ರಿಯಾಗಿತ್ತು. ಅವರಿಗೆ ಕೊರೊನಾ ಆಗಿರುವುದರಿಂದ ಪಾಲ್ಗೊಳ್ಳುತ್ತಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
Special Yaga for increase in life span of Modi held at Dharmasthala temple by Harish Poonja.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm