ಬ್ರೇಕಿಂಗ್ ನ್ಯೂಸ್
17-01-22 03:12 pm Mangaluru Correspondent ಕರಾವಳಿ
ಮಂಗಳೂರು, ಜ.17: ರಾಜ್ಯ ಸರಕಾರ ಓಮಿಕ್ರಾನ್ ಹೆಸರಲ್ಲಿ ಜನರನ್ನು ಭಯಪಡಿಸುತ್ತಿದ್ದು, ನೈಜ ವಿಚಾರ ಮರೆಮಾಚಿ ಕಳ್ಳಾಟ ಆಡುತ್ತಿದೆ. ಆಮೂಲಕ ರಾಜ್ಯದ ಜನರ ಮೇಲೆ ವೀಕೆಂಡ್ ಕರ್ಫ್ಯೂ ಹೇರಿಕೆ ಮಾಡುತ್ತಿದೆ. ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿನಿಂದ ಎಷ್ಟು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಷ್ಟು ಮಂದಿ ಈ ಸೋಂಕಿನಿಂದ ಸತ್ತಿದ್ದಾರೆ ಎಂಬ ನೈಜ ಮಾಹಿತಿ ನೀಡಬೇಕು. ಯಾರು ಕೂಡ ಈ ಸೋಕಿನಿಂದ ಐಸಿಯುಗೆ ದಾಖಲಾಗಿಲ್ಲ ಎನ್ನುವ ಮಾಹಿತಿಯಿದೆ. ಹಾಗಾಗಿ ತಕ್ಷಣವೇ ವೀಕೆಂಡ್ ಕರ್ಫ್ಯೂ ಜಾರಿ ಆದೇಶವನ್ನು ರದ್ದು ಮಾಡಬೇಕೆಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಖಾದರ್, ಓಮಿಕ್ರಾನ್ ವೈರಸ್ ನಿಂದ ಯಾವುದೇ ಅಪಾಯ ಇಲ್ಲವೆಂದು ರಾಜ್ಯ ಸರಕಾರಕ್ಕೂ ತಿಳಿದಿದೆ. ಈ ಬಾರಿ ಸೋಂಕಿಗೆ ತುತ್ತಾಗಿ ಯಾರು ಕೂಡ ಸತ್ತಿಲ್ಲ ಎಂಬುದು ಅಧಿಕಾರಸ್ಥರಿಗೆ ತಿಳಿದಿದೆ. ರಾಜ್ಯ ಸರಕಾರ ಜನರ ಒಳಿತಿಗಾಗಿ ವೀಕೆಂಡ್ ಕರ್ಫ್ಯೂ ಹೇರಿಕೆ ಮಾಡಿಲ್ಲ. ಕಾಂಗ್ರೆಸ್ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆ ಹತ್ತಿಕ್ಕುವ ಉದ್ದೇಶದಿಂದ ತರಾತುರಿಯಲ್ಲಿ ಕರ್ಫ್ಯೂ ಜಾರಿ ಮಾಡಿತ್ತು ಎಂದು ಟೀಕಿಸಿದರು.
ವೀಕೆಂಡ್ ಕರ್ಫ್ಯೂನಿಂದಾಗಿ ಸಮಾಜದ ಹಲವು ಸ್ತರದ ಜನರು ತೀವ್ರ ಕಂಗೆಟ್ಟಿದ್ದಾರೆ. ವ್ಯಾಪಾರಿಗಳು, ದಿನಕೂಲಿ ಕಾರ್ಮಿಕರು, ಬಟ್ಟೆ ಅಂಗಡಿ ಇನ್ನಿತರ ವರ್ತಕರು ತ್ರಾಸಕ್ಕೆ ಒಳಗಾಗಿದ್ದಾರೆ. ಕಚೇರಿ ಬಂದ್ ಆಗಿರುವುದರಿಂದ ಹಲವರು ತಮ್ಮ ಉದ್ಯೋಗ ಕಳಕೊಳ್ಳುವ ಭೀತಿಯಲ್ಲಿದ್ದಾರೆ. ರಾಜ್ಯ ಸರಕಾರ ಜನರಲ್ಲಿ ಭಯ ಮೂಡಿಸುವುದರ ಬದಲು ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು. ಜಿಲ್ಲಾಸ್ಪತ್ರೆ ವೆನ್ಲಾಕ್ ನಲ್ಲಿ ಸಿಬಂದಿ ಕೊರತೆಯಿಂದ ತೀವ್ರ ಸಂಕಷ್ಟ ಎದುರಾಗಿದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ತಾಂತ್ರಿಕ ಸಿಬಂದಿಯೇ ಇಲ್ಲ. ಹುದ್ದೆಗಳ ಭರ್ತಿ ಮಾಡಲು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಹೇಳಿದರು.
ಕೇಂದ್ರ ಸರಕಾರ ಗಣರಾಜ್ಯ ದಿನಕ್ಕೆ ನಾರಾಯಣ ಗುರುಗಳ ಟ್ಯಾಬ್ಲೋ ಹಾಕಲು ನಿರಾಕರಣೆ ಮಾಡಿರುವ ಕ್ರಮವನ್ನು ಖಂಡಿಸಿದ ಯುಟಿ ಖಾದರ್, ಕೇಂದ್ರ ಸರಕಾರ ಈಮೂಲಕ ನಾರಾಯಣ ಗುರುಗಳ ಚಿಂತನೆ, ಸಂದೇಶಗಳನ್ನು ನಿರಾಕರಿಸಿದೆ ಎನ್ನುವಂತಾಗಿದೆ. ಈ ಬಗ್ಗೆ ಸಂಸದ ನಳಿನ್ ಕುಮಾರ್ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
LA U T Khader demanded the state government to withdraw the weekend curfew. Addressing media here on Monday January 17, Khader said, “The state government is playing hide and seek with the people and instilling fear among public over Omicron. It is well aware that people do not have any risk from the virus and so far not a single death has taken place due to Omicron. The state government took the decision over weekend curfew not to safeguard the public. It was a politically motivated decision to derail Mekedatu padayatra.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm