ಬ್ರೇಕಿಂಗ್ ನ್ಯೂಸ್
18-01-22 12:44 pm HK Desk news ಕರಾವಳಿ
ಕಾಸರಗೋಡು, ಜ.18 : ಇತ್ತೀಚೆಗೆ ವಿಟ್ಲ ಬಳಿಯ ಸಾಲೆತ್ತೂರಿನಲ್ಲಿ ಮದುವೆ ಸಂಭ್ರಮದಲ್ಲಿ ಕೊರಗಜ್ಜನ ರೀತಿ ವೇಷ ತೊಟ್ಟು ಅಪಮಾನಗೈದ ಪ್ರಕರಣದ ಆರೋಪಿ ಮದುವೆ ಗಂಡಿನ ಉಪ್ಪಳದ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಜನವರಿ 17ರ ಸೋಮವಾರ ರಾತ್ರಿ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮನೆಗೆ ಕಲ್ಲು ತೂರಿದ್ದು, ಕಿಟಕಿ ಗಾಜು ಪುಡಿಯಾಗಿದೆ. ಅಲ್ಲದೆ, ಮನೆಯ ಕಂಪೌಂಡ್ ಗೋಡೆಗೆ ಕೇಸರಿ ಪೈಂಟ್ ಬಳಿಯಲಾಗಿದೆ.
ರಾತ್ರಿ ವೇಳೆ ಏನೋ ಶಬ್ದ ಕೇಳಿ, ಮನೆಯವರು ಹೊರ ಬಂದಿದ್ದಾರೆ. ಹೊರಗಡೆ ಬೈಕಿನಲ್ಲಿ ಇಬ್ಬರು ಯುವಕರು ಕಂಡುಬಂದಿದ್ದು, ಮನೆಮಂದಿ ಬೊಬ್ಬೆ ಹಾಕುತ್ತಲೇ ಪರಾರಿಯಾಗಿದ್ದಾರೆ. ಗಮನಿಸಿದಾಗ ಮನೆಯ ಕಿಟಕಿ ಗಾಜು ಪುಡಿಯಾಗಿತ್ತು. ಅಲ್ಲದೆ, ಕಂಪೌಂಡ್ ಗೋಡೆಯಲ್ಲಿ ಕೇಸರಿ ಬಣ್ಣ ಬಳಿಯಲಾಗಿತ್ತು.


ಘಟನೆ ಬಗ್ಗೆ ಕುಂಬಳೆ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಉಪ್ಪಳ ಬಳಿಯ ಬೇಕೂರಿನಲ್ಲಿರುವ ಉಮರುಲ್ ಬಾಷಿತ್ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಕೊರಗಜ್ಜನ ವೇಷ ತೊಟ್ಟು ವಿಕೃತಿ ಮೆರೆದ ಬಗ್ಗೆ ವಿಟ್ಲ ಠಾಣೆಯಲ್ಲಿ ಮದುಮಗ ಉಮರುಲ್ ಬಾಷಿತ್ ಸೇರಿ 25 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿ ಕ್ರಮ ಜರುಗಿಸಿದ್ದಾರೆ. ವಿಟ್ಲ ಬಳಿಯ ಸಾಲೆತ್ತೂರಿನ ಯುವತಿಯನ್ನು ಉಪ್ಪಳದ ಉಮರುಲ್ ಬಾಷಿತ್ ಮದುವೆಯಾಗಿದ್ದು, ಮದುವೆಯ ದಿನ ರಾತ್ರಿ ಸಂಪ್ರದಾಯದಂತೆ ವಧುವಿನ ಮನೆಗೆ ಬಂದಿದ್ದಾಗ ಕೊರಗಜ್ಜನ ರೀತಿ ವೇಷ ತೊಟ್ಟಿದ್ದು ಹಿಂದು ಸಂಘಟನೆಗಳ ವಿರೋಧಕ್ಕೆ ಕಾರಣವಾಗಿತ್ತು.
ಮುಸ್ಲಿಂ ಮದುವೆ ಸಂಭ್ರಮ ; ಕೊರಗಜ್ಜನ ರೀತಿ ವೇಷ ತೊಟ್ಟು ಕುಣಿದು ಕುಪ್ಪಳಿಸಿದ ಯುವಕರು, ಆಕ್ರೋಶ
ಮುಸ್ಲಿಂ ಮದುವೆ ಸಂಭ್ರಮದಲ್ಲಿ ಕೊರಗಜ್ಜನಿಗೆ ಅವಮಾನ ; ಸಾಲೆತ್ತೂರಿನ ಮನೆಗೆ ಬಜರಂಗದಳ ಮುತ್ತಿಗೆ ಯತ್ನ, ಬಂಧನ
ಅಪಹಾಸ್ಯದ ಬಗ್ಗೆ ಕೊರಗಜ್ಜನಿಗೆ ದೂರು ; ಯಾವ ರೀತಿ ಕುಣಿಸಿದ್ದಾರೋ ಅದೇ ರೀತಿ ಬೀದಿಯಲ್ಲಿ ಅಲೆದಾಡಿಸುತ್ತೇನೆ !
The house of Umarul Baatish from Uppala Bekur, who has been accused of visiting the house of his bride at Vittal Salethur duly dressed and made up like Koragajja deity of Tulunadu, was stoned on Monday January 17. Window glasses were shattered. The miscreants also reportedly painted the compound wall of the said house saffron.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm