ಬ್ರೇಕಿಂಗ್ ನ್ಯೂಸ್
21-01-22 11:51 am Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.21 : ಕೆಲವು ದಿವಸಗಳಿಂದ ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಭಾರೀ ಗಾತ್ರದ ನಾಗರ ಹಾವುಗಳು ಜನನಿಬಿಡ ಪ್ರದೇಶಗಳಲ್ಲದೆ ಪಿಲಾರು ಶಾಲಾ ಆವರಣದೊಳಗೂ ಸೇರಿದ್ದು ಶಾಲೆಯ ಬಳಿಯಲ್ಲಿದ್ದ ಬೃಹತ್ ನಾಗರಹಾವನ್ನು ಸ್ನೇಕ್ ರಂಜಿತ್ ಅವರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಇತ್ತೀಚೆಗೆ ಪಿಲಾರು ಮಹಾಲಕ್ಷ್ಮೀ ಮಂದಿರದ ಬಳಿಯ ದಿವಂಗತ ಪೊಲೀಸ್ ತ್ಯಾಂಪಣ್ಣ ಶೆಟ್ಟಿ ಅವರ ಜಮೀನಿನ ಅತ್ಯಂತ ಹಳೆಯ ಪೊದೆ ಮತ್ತು ಗುಡ್ಡ ಪ್ರದೇಶವನ್ನ ಜೆಸಿಬಿ ಯಂತ್ರದಿಂದ ಸಮತಟ್ಟುಗೊಳಿಸಲಾಗಿತ್ತು. ನಂತರ ಈ ಪ್ರದೇಶದಲ್ಲಿ ನಿತ್ಯವೂ ಬೃಹದಾಕಾರದ ಸರ್ಪಗಳು ದಿಕ್ಕಿಲ್ಲದೆ ಓಡಾಡುತ್ತಿವೆ. ಕಳೆದ ವಾರ ಪಿಲಾರಿನ ಮಾಜಿ ಯೋಧ ಸದಾನಂದ ಗಟ್ಟಿ(ಬಾಬು ಗಟ್ಟಿ) ಅವರ ಮನೆಗೂ ಬೃಹತ್ ಸರ್ಪ ನುಗ್ಗಿತ್ತು. ಗಟ್ಟಿ ಅವರು ಸರ್ಪವನ್ನ ಹಿಡಿದು ಗೋಣಿ ಚೀಲದಲ್ಲಿ ತುಂಬುತ್ತಿದ್ದಾಗ ಸರ್ಪವು ಗಟ್ಟಿಯವರ ಕೈ ಬೆರಳಿಗೆ ಕಚ್ಚಿ ಗಾಯಗೊಳಿಸಿತ್ತು. ಸಕಾಲದಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದರು.

ಬುಧವಾರ ಸಂಜೆ ಪಿಲಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗಡೆ ಬೃಹದಾಕಾರದ ಎರಡು ಸರ್ಪಗಳು ಸುತ್ತಾಡುತ್ತಿರುವುದನ್ನ ಸ್ಥಳೀಯರು ನೋಡಿದ್ದು ವೀಡಿಯೋ ಮಾಡಿ ಜನರು ಜಾಗರೂಕರಾಗಿರಬೇಕೆಂದು ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು. ಮರುದಿನ ಬೆಳಗ್ಗೆ ಶಾಲಾ ಆವರಣದೊಳಗೆ ಮತ್ತೆ ಬೃಹತ್ ಸರ್ಪವು ಹರಿದಾಡುವುದು ಕಂಡುಬಂದಿದೆ. \

ಸಂಜೆ ವೇಳೆ ಶಾಲಾ ಗೇಟಿನ ಎದುರುಗಡೆ ಬೃಹತ್ ಸರ್ಪ ಠಳಾಯಿಸುತ್ತಿದ್ದುದನ್ನ ಕಂಡ ಸ್ಥಳೀಯರು ತೊಕ್ಕೊಟ್ಟಿನ ರಿಕ್ಷಾ ಚಾಲಕ ಸ್ನೇಕ್ ರಂಜಿತ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ರಂಜಿತ್ ಅವರು ಬೃಹತ್ ಗಾತ್ರದ ನಾಗರವನ್ನ ಬೆನ್ನಟ್ಟಿ ಕಾರ್ಯಾಚರಣೆ ಶುರು ಮಾಡಿದ್ದಾರೆ. ಈ ವೇಳೆ ನಾಗರ ಹಾವು ಶಾಲೆಯ ಮುಂಭಾಗದ ಮನೆಯ ಆವರಣದೊಳಗೆ ನುಗ್ಗಿದ್ದು ರಂಜಿತ್ ಅವರು ಚಾಣಾಕ್ಷತನದಿಂದ ಅದನ್ನ ಹಿಡಿದು ಹಿಂದು ನಂಬಿಕೆ ಪ್ರಕಾರ ಅರಶಿಣ ಮಿಶ್ರಿತ ನೀರು ಚಿಮುಕಿಸಿ ಗೋಣಿ ಚೀಲದೊಳಗೆ ತುಂಬಿ ದೂರದ ಕಾಡಿಗೆ ಕೊಂಡೊಯ್ದು ಬಿಟ್ಟಿದ್ದಾರೆ.
Mangalore Huge venomous snakes spotted near school in Pillar.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm