ಬ್ರೇಕಿಂಗ್ ನ್ಯೂಸ್
21-01-22 11:51 am Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.21 : ಕೆಲವು ದಿವಸಗಳಿಂದ ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಭಾರೀ ಗಾತ್ರದ ನಾಗರ ಹಾವುಗಳು ಜನನಿಬಿಡ ಪ್ರದೇಶಗಳಲ್ಲದೆ ಪಿಲಾರು ಶಾಲಾ ಆವರಣದೊಳಗೂ ಸೇರಿದ್ದು ಶಾಲೆಯ ಬಳಿಯಲ್ಲಿದ್ದ ಬೃಹತ್ ನಾಗರಹಾವನ್ನು ಸ್ನೇಕ್ ರಂಜಿತ್ ಅವರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಇತ್ತೀಚೆಗೆ ಪಿಲಾರು ಮಹಾಲಕ್ಷ್ಮೀ ಮಂದಿರದ ಬಳಿಯ ದಿವಂಗತ ಪೊಲೀಸ್ ತ್ಯಾಂಪಣ್ಣ ಶೆಟ್ಟಿ ಅವರ ಜಮೀನಿನ ಅತ್ಯಂತ ಹಳೆಯ ಪೊದೆ ಮತ್ತು ಗುಡ್ಡ ಪ್ರದೇಶವನ್ನ ಜೆಸಿಬಿ ಯಂತ್ರದಿಂದ ಸಮತಟ್ಟುಗೊಳಿಸಲಾಗಿತ್ತು. ನಂತರ ಈ ಪ್ರದೇಶದಲ್ಲಿ ನಿತ್ಯವೂ ಬೃಹದಾಕಾರದ ಸರ್ಪಗಳು ದಿಕ್ಕಿಲ್ಲದೆ ಓಡಾಡುತ್ತಿವೆ. ಕಳೆದ ವಾರ ಪಿಲಾರಿನ ಮಾಜಿ ಯೋಧ ಸದಾನಂದ ಗಟ್ಟಿ(ಬಾಬು ಗಟ್ಟಿ) ಅವರ ಮನೆಗೂ ಬೃಹತ್ ಸರ್ಪ ನುಗ್ಗಿತ್ತು. ಗಟ್ಟಿ ಅವರು ಸರ್ಪವನ್ನ ಹಿಡಿದು ಗೋಣಿ ಚೀಲದಲ್ಲಿ ತುಂಬುತ್ತಿದ್ದಾಗ ಸರ್ಪವು ಗಟ್ಟಿಯವರ ಕೈ ಬೆರಳಿಗೆ ಕಚ್ಚಿ ಗಾಯಗೊಳಿಸಿತ್ತು. ಸಕಾಲದಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದರು.

ಬುಧವಾರ ಸಂಜೆ ಪಿಲಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗಡೆ ಬೃಹದಾಕಾರದ ಎರಡು ಸರ್ಪಗಳು ಸುತ್ತಾಡುತ್ತಿರುವುದನ್ನ ಸ್ಥಳೀಯರು ನೋಡಿದ್ದು ವೀಡಿಯೋ ಮಾಡಿ ಜನರು ಜಾಗರೂಕರಾಗಿರಬೇಕೆಂದು ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು. ಮರುದಿನ ಬೆಳಗ್ಗೆ ಶಾಲಾ ಆವರಣದೊಳಗೆ ಮತ್ತೆ ಬೃಹತ್ ಸರ್ಪವು ಹರಿದಾಡುವುದು ಕಂಡುಬಂದಿದೆ. \

ಸಂಜೆ ವೇಳೆ ಶಾಲಾ ಗೇಟಿನ ಎದುರುಗಡೆ ಬೃಹತ್ ಸರ್ಪ ಠಳಾಯಿಸುತ್ತಿದ್ದುದನ್ನ ಕಂಡ ಸ್ಥಳೀಯರು ತೊಕ್ಕೊಟ್ಟಿನ ರಿಕ್ಷಾ ಚಾಲಕ ಸ್ನೇಕ್ ರಂಜಿತ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ರಂಜಿತ್ ಅವರು ಬೃಹತ್ ಗಾತ್ರದ ನಾಗರವನ್ನ ಬೆನ್ನಟ್ಟಿ ಕಾರ್ಯಾಚರಣೆ ಶುರು ಮಾಡಿದ್ದಾರೆ. ಈ ವೇಳೆ ನಾಗರ ಹಾವು ಶಾಲೆಯ ಮುಂಭಾಗದ ಮನೆಯ ಆವರಣದೊಳಗೆ ನುಗ್ಗಿದ್ದು ರಂಜಿತ್ ಅವರು ಚಾಣಾಕ್ಷತನದಿಂದ ಅದನ್ನ ಹಿಡಿದು ಹಿಂದು ನಂಬಿಕೆ ಪ್ರಕಾರ ಅರಶಿಣ ಮಿಶ್ರಿತ ನೀರು ಚಿಮುಕಿಸಿ ಗೋಣಿ ಚೀಲದೊಳಗೆ ತುಂಬಿ ದೂರದ ಕಾಡಿಗೆ ಕೊಂಡೊಯ್ದು ಬಿಟ್ಟಿದ್ದಾರೆ.
Mangalore Huge venomous snakes spotted near school in Pillar.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm