ಬ್ರೇಕಿಂಗ್ ನ್ಯೂಸ್
23-01-22 11:13 am Mangalore Correspondent ಕರಾವಳಿ
ಉಳ್ಳಾಲ, ಜ.23 : ಹೆದ್ದಾರಿಯಲ್ಲಿ ಸೂಚನೆ ನೀಡದೆ ಅಚಾನಕ್ಕಾಗಿ ತಿರುವು ಪಡೆದ ಕಾರು ಚಾಲಕನ ಪ್ರಾಣ ಉಳಿಸಲು ಹೋದ ಭಾರೀ ಗಾತ್ರದ ಟ್ರಕ್ ಕಮರಿಗೆ ಉರುಳಿ ಹೆದ್ದಾರಿ ಸಂಚಾರ ವ್ಯತ್ಯಯಗೊಂಡ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದೆ.
ಪುಣೆಯಿಂದ ಕೇರಳದ ಕಾಸರಗೋಡಿಗೆ ಟಾಟಾ ಹುಂಡೈ ಕಾರುಗಳನ್ನ ಹೊತ್ತೊಯ್ಯುತ್ತಿದ್ದ ಭಾರೀ ಗಾತ್ರದ ಟ್ರಕ್ ಕಾಪಿಕಾಡು ಎರಡನೇ ಅಡ್ಡ ರಸ್ತೆಯ ರಾಜ್ ಕೇಟರರ್ಸ್ ಬಳಿಯ ಕಮರಿಗೆ ಉರುಳಿದೆ. ಇಂದು ಬೆಳಗ್ಗೆ 7 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ತೊಕ್ಕೊಟ್ಟಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಟ್ರಕ್ ಮುಂದುಗಡೆಯಿಂದ ಕಾಪಿಕಾಡು ಎರಡನೇ ಅಡ್ಡ ರಸ್ತೆ ನಿವಾಸಿ ಆಲ್ಫ್ರೆಡ್ ಗಾಡ್ ಫ್ರೀ ಡಿಸೋಜ ಎಂಬವರು ಬ್ರೀಝ ಕಾರು ಚಲಾಯಿಸುತ್ತಿದ್ದರು. ಕಾಪಿಕಾಡು ಎರಡನೇ ಅಡ್ಡ ರಸ್ತೆ ಬರುತ್ತಿದ್ದಂತೆ ಆಲ್ಪ್ರೆಡ್ ಅವರು ಯಾವುದೇ ಸೂಚನೆ ನೀಡದೆ ಅಚಾನಕ್ಕಾಗಿ ಕಾರನ್ನ ತಿರುಗಿಸಿದ್ದಾರೆ. ಇದರಿಂದ ವಿಚಲಿತನಾದ ಹಿಂಬದಿ ಇದ್ದ ಟ್ರಕ್ ಚಾಲಕ ಬಿಹಾರ ಮೂಲದ ರಮೇಶ್ ಕಾರನ್ನ ರಕ್ಷಿಸಲು ಹೋಗಿ ಟ್ರಕ್ಕನ್ನೇ ಕಮರಿಗೆ ಹಾಕಿದ್ದಾನೆ.






ತನ್ನ ಪ್ರಾಣ ರಕ್ಷಿಸಿದ ಪರಿಣಿತ ಚಾಲಕ ರಮೇಶನನ್ನು ಕಾರು ಚಾಲಕ ಆಲ್ಫ್ರೆಡ್ ಏಕ ವಚನದಲ್ಲಿ ನಿಂದಿಸಿ ತನ್ನದೇನೂ ತಪ್ಪಿಲ್ಲವೆಂದು ಬಿಂಬಿಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರಿಗೂ ಕಾನೂನಿನ ಪಾಠ ಹೇಳಿ ಕೊಡಲು ಮುಂದಾಗಿದ್ದಾರೆ. ಅಷ್ಟರಲ್ಲೇ ಅಪಘಾತವಾದ ದೃಶ್ಯವು ಪಕ್ಕದ ಸಿಮೆಂಟ್ ಅಂಗಡಿಯ ಸಿಸಿ ಟಿವಿ ಫೂಟೇಜಲ್ಲಿ ಲಭಿಸಿದ್ದು ಇದನ್ನ ಕಂಡ ನಂತರ ಆಲ್ಪ್ರೆಡ್ ಗೆ ಜ್ನಾನೋದಯವಾಗಿದೆ. ಟ್ರಕ್ ಕಮರಿಗೆ ಉರುಳಿದ ಸಂದರ್ಭ ರಸ್ತೆ ಬದಿಯಲ್ಲಿ ಇಬ್ಬರು ಪಾದಚಾರಿಗಳು ನಿಂತಿದ್ದು ಕೂದಲೆಲೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Major trailer truck - car accident averted near Thokottu. The huge truck goes off road in order to save the car driver who took a sudden turn without any indication.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm