ಬ್ರೇಕಿಂಗ್ ನ್ಯೂಸ್
23-01-22 11:13 am Mangalore Correspondent ಕರಾವಳಿ
ಉಳ್ಳಾಲ, ಜ.23 : ಹೆದ್ದಾರಿಯಲ್ಲಿ ಸೂಚನೆ ನೀಡದೆ ಅಚಾನಕ್ಕಾಗಿ ತಿರುವು ಪಡೆದ ಕಾರು ಚಾಲಕನ ಪ್ರಾಣ ಉಳಿಸಲು ಹೋದ ಭಾರೀ ಗಾತ್ರದ ಟ್ರಕ್ ಕಮರಿಗೆ ಉರುಳಿ ಹೆದ್ದಾರಿ ಸಂಚಾರ ವ್ಯತ್ಯಯಗೊಂಡ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದೆ.
ಪುಣೆಯಿಂದ ಕೇರಳದ ಕಾಸರಗೋಡಿಗೆ ಟಾಟಾ ಹುಂಡೈ ಕಾರುಗಳನ್ನ ಹೊತ್ತೊಯ್ಯುತ್ತಿದ್ದ ಭಾರೀ ಗಾತ್ರದ ಟ್ರಕ್ ಕಾಪಿಕಾಡು ಎರಡನೇ ಅಡ್ಡ ರಸ್ತೆಯ ರಾಜ್ ಕೇಟರರ್ಸ್ ಬಳಿಯ ಕಮರಿಗೆ ಉರುಳಿದೆ. ಇಂದು ಬೆಳಗ್ಗೆ 7 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ತೊಕ್ಕೊಟ್ಟಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಟ್ರಕ್ ಮುಂದುಗಡೆಯಿಂದ ಕಾಪಿಕಾಡು ಎರಡನೇ ಅಡ್ಡ ರಸ್ತೆ ನಿವಾಸಿ ಆಲ್ಫ್ರೆಡ್ ಗಾಡ್ ಫ್ರೀ ಡಿಸೋಜ ಎಂಬವರು ಬ್ರೀಝ ಕಾರು ಚಲಾಯಿಸುತ್ತಿದ್ದರು. ಕಾಪಿಕಾಡು ಎರಡನೇ ಅಡ್ಡ ರಸ್ತೆ ಬರುತ್ತಿದ್ದಂತೆ ಆಲ್ಪ್ರೆಡ್ ಅವರು ಯಾವುದೇ ಸೂಚನೆ ನೀಡದೆ ಅಚಾನಕ್ಕಾಗಿ ಕಾರನ್ನ ತಿರುಗಿಸಿದ್ದಾರೆ. ಇದರಿಂದ ವಿಚಲಿತನಾದ ಹಿಂಬದಿ ಇದ್ದ ಟ್ರಕ್ ಚಾಲಕ ಬಿಹಾರ ಮೂಲದ ರಮೇಶ್ ಕಾರನ್ನ ರಕ್ಷಿಸಲು ಹೋಗಿ ಟ್ರಕ್ಕನ್ನೇ ಕಮರಿಗೆ ಹಾಕಿದ್ದಾನೆ.






ತನ್ನ ಪ್ರಾಣ ರಕ್ಷಿಸಿದ ಪರಿಣಿತ ಚಾಲಕ ರಮೇಶನನ್ನು ಕಾರು ಚಾಲಕ ಆಲ್ಫ್ರೆಡ್ ಏಕ ವಚನದಲ್ಲಿ ನಿಂದಿಸಿ ತನ್ನದೇನೂ ತಪ್ಪಿಲ್ಲವೆಂದು ಬಿಂಬಿಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರಿಗೂ ಕಾನೂನಿನ ಪಾಠ ಹೇಳಿ ಕೊಡಲು ಮುಂದಾಗಿದ್ದಾರೆ. ಅಷ್ಟರಲ್ಲೇ ಅಪಘಾತವಾದ ದೃಶ್ಯವು ಪಕ್ಕದ ಸಿಮೆಂಟ್ ಅಂಗಡಿಯ ಸಿಸಿ ಟಿವಿ ಫೂಟೇಜಲ್ಲಿ ಲಭಿಸಿದ್ದು ಇದನ್ನ ಕಂಡ ನಂತರ ಆಲ್ಪ್ರೆಡ್ ಗೆ ಜ್ನಾನೋದಯವಾಗಿದೆ. ಟ್ರಕ್ ಕಮರಿಗೆ ಉರುಳಿದ ಸಂದರ್ಭ ರಸ್ತೆ ಬದಿಯಲ್ಲಿ ಇಬ್ಬರು ಪಾದಚಾರಿಗಳು ನಿಂತಿದ್ದು ಕೂದಲೆಲೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Major trailer truck - car accident averted near Thokottu. The huge truck goes off road in order to save the car driver who took a sudden turn without any indication.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm