ಬ್ರೇಕಿಂಗ್ ನ್ಯೂಸ್
23-01-22 08:27 pm Mangalore Correspondent ಕರಾವಳಿ
ಮಂಗಳೂರು, ಜ.23 ಕಮ್ಯುನಿಸ್ಟರ ಕುತಂತ್ರದಿಂದಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ದಚಿತ್ರಕ್ಕೆ ದೆಹಲಿಯಲ್ಲಿ ಅವಕಾಶ ಸಿಗದಿರುವುದಕ್ಕೆ ಎಲ್ಲ ಹಿಂದೂಗಳ ಮನಸಿಗೆ ನೋವುಂಟಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯರಾದ ಜನಾರ್ದನ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆಯನ್ನ ಜನವರಿ 26 ರಂದು ಆಯೋಜಿಸಿದ್ದು ಜಾತಿ ಭೇದ ಮರೆತು ಕಾರ್ಯಕ್ರಮದಲ್ಲಿ ಭಾಗವಹಿಸಲು ಕರೆ ನೀಡಿದ್ದಾರೆ, ಅವರ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ. ಅಲ್ಲದೆ, ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆಗೆ ವಿಶ್ವ ಹಿಂದು ಪರಿಷತ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್, ಅಸಮಾನತೆಯ ವಿರುದ್ಧ ಹೋರಾಟ ಮಾಡಿದ, ದೇಶ ಕಂಡ ಮಹಾನ್ ಸಂತ ಪೂಜನೀಯ ಬ್ರಹ್ಮಶ್ರೀ ನಾರಾಯಣ ಗುರುಗಳು, ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೋಸ್ಕರ, ಸಮಾಜದಲ್ಲಿನ ಮೇಲ್ಜಾತಿ ಕೀಳ್ಜಾತಿ ಭೇದ ಭಾವವನ್ನು ದೂರಮಾಡಲು ಹೋರಾಟ ಮಾಡಿದ ಮಹಾನ್ ಯೋಗಿ.

ವಿಶ್ವ ಹಿಂದು ಪರಿಷತ್ತಿನ ಕಾರ್ಯಕರ್ತರು ಪ್ರಾತಃ ಸ್ಮರಣೆಯಲ್ಲಿ ಶ್ರೀ ಗುರುಗಳನ್ನು ನಿತ್ಯ ಸ್ಮರಣೆ ಮಾಡುತ್ತೇವೆ. 2017 ರಲ್ಲಿ ನಡೆದ ಸಾವಿರಾರು ಸಾಧು ಸಂತರು ಸೇರಿ ಇತಿಹಾಸ ನಿರ್ಮಿಸಿದ ಉಡುಪಿಯ ಧರ್ಮಸಂಸದ್ ಕಾರ್ಯಕ್ರಮದ ವೇದಿಕೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ಇಡಲಾಗಿತ್ತು. ಗಣರಾಜ್ಯ ದಿನದಂದು ನಡೆಯಲಿರುವ ಸ್ತಬ್ಧಚಿತ್ರದ ಮೆರವಣಿಗೆ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಬೆಂಬಲ ಸೂಚಿಸುತ್ತದೆ. ಮತ್ತು ಸಂಘಟನೆಯ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸುತ್ತದೆ ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Narayana Guru Tableau themed on traditional handicrafts VHP to supports Janardhana Poojary procession.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am