ಬ್ರೇಕಿಂಗ್ ನ್ಯೂಸ್
25-01-22 11:15 pm Mangalore Correspondent ಕರಾವಳಿ
ಮಂಗಳೂರು, ಜ.25 : ನೀರಿಲ್ಲದ ಭೂಮಿಯಲ್ಲಿ ಗುಡ್ಡಕ್ಕೆ ಸುರಂಗ ಕೊರೆದು ಕೃಷಿ ಭೂಮಿಯನ್ನು ಹಸನಾಗಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಅಮೈ ನಿವಾಸಿ, ಪ್ರಗತಿಪರ ಕೃಷಿಕ ಮಹಾಲಿಂಗ ನಾಯ್ಕ್ ಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
ತಮ್ಮ ಕೃಷಿ ಜಮೀನಿಗೆ ನೀರಿಲ್ಲದ ಸಂದರ್ಭದಲ್ಲಿ ಏಕಾಂಗಿಯಾಗಿ ಸುರಂಗ ಕೊರೆದು ಹಲವು ವರ್ಷಗಳ ಶ್ರಮದ ಬಳಿಕ ಅಂತಿಮವಾಗಿ ನೀರ ಝರಿಯನ್ನು ಹರಿಸಿದ್ದ ಮಹಾಲಿಂಗ ನಾಯ್ಕ್ ಸಾಧನೆ ಈಗ ರಾಷ್ಟ್ರದ ಗಮನ ಸೆಳೆದಿದೆ. ಕರಾವಳಿ ಜಿಲ್ಲೆಗಳಲ್ಲಿ ಕೃಷಿ ನಿಧಾನವಾಗಿ ಹಿನ್ನೆಲೆಗೆ ಸರಿಯುತ್ತಿರುವ ಈ ಸಂದರ್ಭದಲ್ಲಿ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಾ ನಿರಂತರ ಸಾಧನೆ ಮೆರೆಯುತ್ತಾ ಗಮನ ಸೆಳೆದ ಅಮೈ ಮಾಹಾಲಿಂಗ ನಾಯ್ಕರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ.
ಏಕಾಂಗಿಯಾಗಿ ಅಪಾಯಕಾರಿ ಗುಡ್ಡವನ್ನು ಅಗೆದು ಜೀವಜಲವನ್ನು ತರಿಸಿ ಬೋಳು ಗುಡ್ಡವನ್ನು ನಂದನವನ ಮಾಡಿದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲದ ಅಡ್ಯನಡ್ಕ ಸಮೀಪದ ಅಮೈ ನಿವಾಸಿ, ಸಾಮಾನ್ಯ ಕೃಷಿಕ 73ರ ಹರೆಯದ ಮಹಾಲಿಂಗ ನಾಯ್ಕರನ್ನು ಅತ್ಯುನ್ನತ ಪ್ರಶಸ್ತಿಗೆ ಗೌರವಿಸಿದ್ದು ಎಲ್ಲರ ಗಮನ ಸೆಳೆಯುವಂತಾಗಿದೆ.
ಅಡಕೆ, ತೆಂಗಿನ ಮರ ಏರುತ್ತ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮಹಾಲಿಂಗ ನಾಯ್ಕ, 40 ವರ್ಷಗಳ ಹಿಂದೆ ಸ್ವಂತ ಕೃಷಿಯ ಕನಸು ಕಂಡಿದ್ದರು. ಆದರೆ ಅವರಲ್ಲಿ ಭೂಮಿ ಇರಲಿಲ್ಲ. ಅವರು ಕೂಲಿಗೆ ಹೋಗುತ್ತಿದ್ದ ಅಮೈ ಮಹಾಬಲ ಭಟ್ಟರೇ ಎರಡು ಎಕರೆ ಭೂಮಿಯನ್ನು ನಾಯ್ಕರಿಗೆ ನೀಡಿದ್ದರು. 1978ರಲ್ಲಿ ಅವರಿಗೆ ಭೂಮಿ ಸಿಕ್ಕಿತ್ತು. ಆದರೆ ಬೋಳುಗುಡ್ಡ ಜಾಗವಾಗಿದ್ದರಿಂದ ಅಲ್ಲಿ ನೀರಿನ ಒರತೆಯೇ ಇರಲಿಲ್ಲ. ಮೊದಲಿಗೆ, ಸಣ್ಣ ಗುಡಿಸಲು ಕಟ್ಟಿದರು. ಕುಡಿಯುವ ನೀರಿಗಾಗಿ ಪಕ್ಕದ ಮನೆಯನ್ನು ಅವಲಂಬಿಸಿದ್ದರು. ತನ್ನ ಎತ್ತರದ ಭೂಮಿಯಲ್ಲಿ ಬಾವಿ ತೋಡುವುದೂ ಅಸಾಧ್ಯ ಎನ್ನುವುದನ್ನರಿತ ನಾಯ್ಕರು, ಸುರಂಗ ಕೊರೆಯುವ ಉಪಾಯ ಹೂಡಿದ್ದರು. ದಿನವೂ ಅರ್ಧ ದಿನ ಕೂಲಿ ಕೆಲಸ, ಉಳಿದ ಹೊತ್ತು ರಾತ್ರಿಯೂ ಸೇರಿ ಸುರಂಗ ಕೊರೆಯಲು ಆರಂಭಿಸಿದ್ದರು. ರಾತ್ರಿ ಸೀಮೆ ಎಣ್ಣೆ, ತೆಂಗಿನೆಣ್ಣೆ ದೀಪದ ಬೆಳಕಲ್ಲೇ ಏಕಾಂಗಿಯಾಗಿ ಸುರಂಗ ಕೊರೆಯ ತೊಡಗಿದ್ದರು.
ಆದರೆ ಮೊದಲ ಸುರಂಗದಲ್ಲಿ ನೀರು ಸಿಕ್ಕಿರಲಿಲ್ಲ. ಆಬಳಿಕ ಸತತ 25 ಮೀಟರ್ ಉದ್ದದ ಐದು ಸುರಂಗಗಳನ್ನು ಕೊರೆದರೂ ನೀರು ಸಿಗದೆ ಜನರಿಂದ ಗೇಲಿಗೊಳಗಾಗುವ ಸ್ಥಿತಿ ಎದುರಾಗಿತ್ತು. ಇದರಿಂದ ನಿರಾಶರಾಗದ ಮಹಾಲಿಂಗ ನಾಯ್ಕ ಭಗೀರಥ ಪ್ರಯತ್ನ ಎಂಬಂತೆ 6ನೇ ಸುರಂಗದ ಕೆಲಸಕ್ಕೆ ಹೊರಟಿದ್ದರು. ಅದರಲ್ಲಿ ಮೊದಲ ಬಾರಿಗೆ ಜೀವಜಲ ಸಿಕ್ಕಿತ್ತು. ಆದರೆ ಕೃಷಿಗೆ ಸಾಕಾಗುವಷ್ಟಿರಲಿಲ್ಲ. ಅದರ ಪಕ್ಕದಲ್ಲೇ 7ನೇ ಸುರಂಗ ಕೊರೆದ ಮಹಾಲಿಂಗ ನಾಯ್ಕರಿಗೆ ನೀರಿನ ಸೆಲೆಯೇ ಸಿಕ್ಕಿತ್ತು. ಅದರಿಂದ ನೀರು ಸಂಗ್ರಹಿಸಲು ಕೃತಕ ಮಣ್ಣಿನ ಕೆರೆ ನಿರ್ಮಿಸಿದರು. ಬಳಿಕ ತನ್ನ ಭೂಮಿಯಲ್ಲಿ ಯಾರೂ ಊಹಿಸದ ರೀತಿ ಭತ್ತ, ಅಡಕೆ, ತೆಂಗು, ಬಾಳೆ ಗಿಡವನ್ನು ನೆಟ್ಟು ಬೆಳೆಸಿದರು. ಆಮೂಲಕ ಯಶಸ್ವೀ ಜಲಸಾಧಕ, ಕೃಷಿಕರೆನಿಸಿಕೊಂಡ ಮಹಾಲಿಂಗ ನಾಯ್ಕರು ಅಪರೂಪದ ಸಾಧಕ ಎನ್ನುವ ಹಿರಿಮೆಗೆ ಪಾತ್ರರಾಗಿದ್ದರು. 2018ರಲ್ಲಿ ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
On the eve of the Republic Day, the Centre on Tuesday January 25 announced the list of recipients of the Padma awards. ‘Tunnel Man’ Amai Mahalinga Naik, who single-handedly worked to irrigate his two-acre land and succeeded in raising a small plantation has been chosen for the Padma Shri Award in the ‘Others – Agriculture’ category.
02-05-24 06:15 pm
Bangalore Correspondent
Naveen Gowda, Prajwal Revanna sex case, SIT:...
02-05-24 04:41 pm
lookout notice, Prajwal Revanna, SIT: ಪ್ರಜ್ವಲ...
02-05-24 01:30 pm
Yatnal, DK Shivakumar: ರಾಜ್ಯದಲ್ಲಿ ಎರಡು ಸಿಡಿ ಫ...
02-05-24 10:24 am
Kumaraswamy, DK shivakumar, prajwal Revanna:...
02-05-24 10:20 am
01-05-24 10:25 pm
HK NEWS
Salman Khan Shootout: ನಟ ಸಲ್ಮಾನ್ ಖಾನ್ ಮನೆ ಮೇಲ...
01-05-24 03:57 pm
Arvind Kejriwals, Supreme Court: ಬದುಕು ಮತ್ತು...
30-04-24 11:02 pm
ಭಾರತ ಜಗತ್ತಿನ ಸೂಪರ್ ಪವರ್ ಆಗಲು ಹೊರಟಿದ್ದರೆ, ಪಾ...
30-04-24 06:20 pm
Prajwal Revanna Hassan sex, Amit Shah: ರಾಷ್ಟ್...
30-04-24 05:27 pm
02-05-24 07:52 pm
Mangalore Correspondent
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
Hot sun heat, Mangalore temperature; ಕರಾವಳಿಯಲ...
01-05-24 11:43 am
Mangalore Super gold and diamound showroom, T...
30-04-24 08:04 pm
01-05-24 10:18 pm
Mangaluru Correspondent
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm
Cyber Fraud, Online Crime: ಹೀಗೂ ಮೋಸ ಮಾಡ್ತಾರೆ,...
30-04-24 10:16 pm
Bangalore Crime, Fraud, House Rent: ಫ್ಲ್ಯಾಟ್...
29-04-24 11:50 am
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm