ಬ್ರೇಕಿಂಗ್ ನ್ಯೂಸ್
26-01-22 05:43 pm Mangalore correspondence ಕರಾವಳಿ
ಮಂಗಳೂರು, ಜ.26 : ಕಮ್ಯುನಿಸ್ಟ್ ಮತ್ತು ಕಾಂಗ್ರೆಸಿಗರು ಬ್ರಹ್ಮಶ್ರೀ ನಾರಾಯಣ ಗುರು ಹೆಸರಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. ನಾರಾಯಣ ಗುರುಗಳ ಹೆಸರನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ತಪ್ಪು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಗಣರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸುನಿಲ್ ಕುಮಾರ್, ನಾರಾಯಣ ಗುರುಗಳು ಒಂದು ಸಮುದಾಯಕ್ಕೆ, ಒಂದು ಜಾತಿಗೆ, ಒಂದು ಧರ್ಮಕ್ಕೆ ಸೀಮಿತರಾದ ವ್ಯಕ್ತಿಯಲ್ಲ. ಅವೆಲ್ಲದಕ್ಕಿಂತಲೂ ಮಿಗಿಲಾದ ವ್ಯಕ್ತಿತ್ವ ಅವರದ್ದು. ಆದರೆ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಗುರುಗಳ ಹೆಸರನ್ನು ತಮ್ಮ ಏಳಿಗೆಗಾಗಿ, ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಈ ರೀತಿಯ ವರ್ತನೆಯಿಂದ ಸಮಾಜದಲ್ಲಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇವರು ಕಳೆದ ಬಾರಿ ಮಂಗಳೂರಿನ ಲೇಡಿಹಿಲ್ ಸರ್ಕಲ್ ಗೆ ನಾರಾಯಣ ಗುರುಗಳ ಹೆಸರಿಡುವ ಪ್ರಸ್ತಾಪ ಬಂದಾಗ ವಿರೋಧ ಮಾಡಿದ್ದರು. ಕಾಂಗ್ರೆಸ್ ನಾಯಕರು ಅದಕ್ಕೆ ವಿರೋಧಿಸಿದ್ದು ನಾರಾಯಣ ಗುರುಗಳಿಗೆ ಮಾಡಿದ ಅವಮಾನ ಅಲ್ಲವೇ ಎಂದು ಪ್ರಶ್ನೆ ಮಾಡಿದರು.
ನಾರಾಯಣ ಗುರುಗಳ ಸ್ತಬ್ಧಚಿತ್ರದ ಹೆಸರಲ್ಲಿ ಕೇರಳ ಸರಕಾರ ಹುಟ್ಟುಹಾಕಿರುವ ವಿವಾದಕ್ಕೆ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಬೆಂಕಿ ಕೊಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು. ಕಾಂಗ್ರೆಸ್ ನಾಯಕರು ತಮ್ಮ ಪಕ್ಷಕ್ಕೆ ಬಿಜೆಪಿ ಶಾಸಕರು ಬರಲಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸುನಿಲ್, ಕಾಂಗ್ರೆಸ್ ನಾಯಕರು ಅಭದ್ರತೆಯ ಭಾವನೆಯಿದೆ. ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಎಲ್ಲಿ ಮುಟ್ಟಿದೆ ಎನ್ನುವುದು ಎಲ್ಲರಿಗೂ ಗೊತ್ತು. ಇಂಥ ಅಭದ್ರ ಭಾವದ ಸ್ಥಿತಿಯಲ್ಲಿ ಏನೇನೊ ಹೇಳುತ್ತಿದ್ದಾರೆ. ಮುಂದಿನ ಬಿಬಿಎಂಪಿ ಮತ್ತು ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಿತಿ ತಿಳಿಯಲಿದೆ. ಒಡೆದ ಮನೆಯಾಗಿರುವ ರಾಜ್ಯದ ಕಾಂಗ್ರೆಸ್, ಇನ್ನಷ್ಟು ಅಧೋಗತಿಗೆ ಹೋಗಲಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಹೃದಯ ಪೂರ್ವಕವಾಗಿ ನನಗೆ ವಹಿಸಿದ ಜವಾಬ್ದಾರಿಯನ್ನು ಸ್ವಾಗತಿಸುತ್ತೇನೆ. ಇಲ್ಲಿನ ಶಾಸಕರ ಜೊತೆಗೆ ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
District in-charge minister Sunil Kumar on Wednesday January 26 slammed the Communists and Congress and accused them of misusing Bahmashree Narayana Guru’s name for political gain. Speaking to media after the Republic Day celebration at Nehru Maidan, he said, “Narayana Guru is not limited to a caste or system, he is above all. Congress and Communists are misusing Narayana Guru’s name for politics.
02-05-24 10:54 pm
Bangalore Correspondent
Karnataka Legislative Council Election date:...
02-05-24 10:23 pm
Prajwal Revanna mass rapist, Rahul Gandhi, Mo...
02-05-24 09:18 pm
CT Ravi, Prajwal Ravanna: ಪ್ರಜ್ವಲ್ ರೇವಣ್ಣ ಸೆಕ...
02-05-24 08:54 pm
Rashmi Gautam, Prajwal Revanna sex case: ಹಸಿದ...
02-05-24 06:15 pm
02-05-24 10:07 pm
HK News Desk
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
Senator Danesh Kumar Palyani ; ಪಾಕಿಸ್ತಾನದಲ್ಲಿ...
01-05-24 10:25 pm
Salman Khan Shootout: ನಟ ಸಲ್ಮಾನ್ ಖಾನ್ ಮನೆ ಮೇಲ...
01-05-24 03:57 pm
Arvind Kejriwals, Supreme Court: ಬದುಕು ಮತ್ತು...
30-04-24 11:02 pm
02-05-24 07:52 pm
Mangalore Correspondent
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
Hot sun heat, Mangalore temperature; ಕರಾವಳಿಯಲ...
01-05-24 11:43 am
Mangalore Super gold and diamound showroom, T...
30-04-24 08:04 pm
01-05-24 10:18 pm
Mangaluru Correspondent
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm
Cyber Fraud, Online Crime: ಹೀಗೂ ಮೋಸ ಮಾಡ್ತಾರೆ,...
30-04-24 10:16 pm
Bangalore Crime, Fraud, House Rent: ಫ್ಲ್ಯಾಟ್...
29-04-24 11:50 am
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm