ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.
ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.
ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm