ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.

ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.

ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm