ಬ್ರೇಕಿಂಗ್ ನ್ಯೂಸ್
29-01-22 11:19 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.29 : ಜ್ವರ, ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 19 ವರ್ಷದ ಹುಡುಗನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದು ಆತನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್ (19) ಮೃತ ಹುಡುಗ. ಈತನಿಗೆ ಎರಡು ದಿನಗಳ ಹಿಂದೆ ಜ್ವರ ಮತ್ತು ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಶಿರ್ತಾಡಿಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ, ಹೃದಯದ ಬಡಿತದಲ್ಲಿ ಅಸಮತೋಲನ ಇರುವ ಬಗ್ಗೆ ಹೇಳಿದ್ದರು. ಶುಕ್ರವಾರ ಸಂಜೆ ಮಂಗಳೂರಿನ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿದಾಗ ಹಾರ್ಟ್ ಬೀಟ್ ಹೆಚ್ಚಿರುವುದು ಮತ್ತು ಸಮಸ್ಯೆ ಇರುವುದು ಕಂಡುಬಂದಿದ್ದು ಕೂಡಲೇ ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಶಶಾಂಕ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹೀಗಾಗಿ ವೈದ್ಯರ ಕೋರಿಕೆಯಂತೆ ಮನೆಯವರು ಹುಡುಗನ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮನೆಯವರ ಪರಿಸ್ಥಿತಿ ನೋಡಿ ಆಸ್ಪತ್ರೆಯ ವೈದ್ಯರು ಬಿಲ್ ಕಡಿತ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಶಶಾಂಕ್, ಕೊಕ್ರಾಡಿ ಗ್ರಾಮದ ಸುಂದರ ಎಂಬವರ ಮಗನಾಗಿದ್ದು ಮೂವರು ಮಕ್ಕಳಲ್ಲಿ ಕಿರಿಯವ. ಬಡ ಕುಟುಂಬವಾಗಿದ್ದು ಇಬ್ಬರು ಅಕ್ಕಂದಿರು. ಮನೆಯಲ್ಲಿ ಬಡತನದ ಕಾರಣ ಸಣ್ಣ ವಯಸ್ಸಿನಲ್ಲೇ ಕೆಲಸಕ್ಕೆ ಹೋಗಲು ಆರಂಭಿಸಿದ್ದ. ಆದರೆ ವಿಧಿ ಕೈಕೊಟ್ಟಿದ್ದು ಸಣ್ಣ ವಯಸ್ಸಿನಲ್ಲೇ ಹುಡುಗನ ಪ್ರಾಣ ಕಸಿದಿದೆ.
ವಿಶೇಷ ಅಂದರೆ, ಶಶಾಂಕನ ಕುಟುಂಬದಲ್ಲಿ ಕಳೆದ ಎರಡು - ಮೂರು ವರ್ಷಗಳ ಅಂತರದಲ್ಲಿ ನಾಲ್ವರು ಸಾವು ಕಂಡಿದ್ದಾರೆ. ಅಜ್ಜ , ಅಜ್ಜಿ ಕ್ಯಾನ್ಸರ್ ಮತ್ತು ಹೃದಯಾಘಾತದಿಂದ ಸಾವು ಕಂಡಿದ್ದರೆ, ಮಾವ ನಾರಾಯಣ ಎಂಬವರು ಅಕಾಲಿಕ ಮರಣ ಹೊಂದಿದ್ದರು. ಬೆನ್ನು ಬೆನ್ನಿಗೆ ಮೂವರ ಆಸ್ಪತ್ರೆ ಖರ್ಚಿಗಾಗಿ ಮನೆಯವರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ಈಗ ಮತ್ತೊಬ್ಬ ಕುಡಿ ಸಾವು ಕಂಡಿದ್ದು ಕುಟುಂಬ ದಿಕ್ಕೆಟ್ಟು ಹೋಗಿದೆ. ಈ ಬಗ್ಗೆ ಯಾರಾದರೂ ದಾನಿಗಳು ಸಹಾಯ ಮಾಡುವುದಿದ್ದರೆ ಸಹಾಯ ಆದೀತು ಎಂದು ಅಲ್ಲಿನ ಸ್ಥಳೀಯರು ಕೇಳಿಕೊಂಡಿದ್ದಾರೆ.
Mangalore 19 year old boy dies of Heart Attack, family donates eyes. The deceased has been identified as Shashank from Belthangady.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm