ಬ್ರೇಕಿಂಗ್ ನ್ಯೂಸ್
29-01-22 11:19 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.29 : ಜ್ವರ, ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 19 ವರ್ಷದ ಹುಡುಗನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದು ಆತನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್ (19) ಮೃತ ಹುಡುಗ. ಈತನಿಗೆ ಎರಡು ದಿನಗಳ ಹಿಂದೆ ಜ್ವರ ಮತ್ತು ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಶಿರ್ತಾಡಿಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ, ಹೃದಯದ ಬಡಿತದಲ್ಲಿ ಅಸಮತೋಲನ ಇರುವ ಬಗ್ಗೆ ಹೇಳಿದ್ದರು. ಶುಕ್ರವಾರ ಸಂಜೆ ಮಂಗಳೂರಿನ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿದಾಗ ಹಾರ್ಟ್ ಬೀಟ್ ಹೆಚ್ಚಿರುವುದು ಮತ್ತು ಸಮಸ್ಯೆ ಇರುವುದು ಕಂಡುಬಂದಿದ್ದು ಕೂಡಲೇ ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಶಶಾಂಕ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹೀಗಾಗಿ ವೈದ್ಯರ ಕೋರಿಕೆಯಂತೆ ಮನೆಯವರು ಹುಡುಗನ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮನೆಯವರ ಪರಿಸ್ಥಿತಿ ನೋಡಿ ಆಸ್ಪತ್ರೆಯ ವೈದ್ಯರು ಬಿಲ್ ಕಡಿತ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಶಶಾಂಕ್, ಕೊಕ್ರಾಡಿ ಗ್ರಾಮದ ಸುಂದರ ಎಂಬವರ ಮಗನಾಗಿದ್ದು ಮೂವರು ಮಕ್ಕಳಲ್ಲಿ ಕಿರಿಯವ. ಬಡ ಕುಟುಂಬವಾಗಿದ್ದು ಇಬ್ಬರು ಅಕ್ಕಂದಿರು. ಮನೆಯಲ್ಲಿ ಬಡತನದ ಕಾರಣ ಸಣ್ಣ ವಯಸ್ಸಿನಲ್ಲೇ ಕೆಲಸಕ್ಕೆ ಹೋಗಲು ಆರಂಭಿಸಿದ್ದ. ಆದರೆ ವಿಧಿ ಕೈಕೊಟ್ಟಿದ್ದು ಸಣ್ಣ ವಯಸ್ಸಿನಲ್ಲೇ ಹುಡುಗನ ಪ್ರಾಣ ಕಸಿದಿದೆ.
ವಿಶೇಷ ಅಂದರೆ, ಶಶಾಂಕನ ಕುಟುಂಬದಲ್ಲಿ ಕಳೆದ ಎರಡು - ಮೂರು ವರ್ಷಗಳ ಅಂತರದಲ್ಲಿ ನಾಲ್ವರು ಸಾವು ಕಂಡಿದ್ದಾರೆ. ಅಜ್ಜ , ಅಜ್ಜಿ ಕ್ಯಾನ್ಸರ್ ಮತ್ತು ಹೃದಯಾಘಾತದಿಂದ ಸಾವು ಕಂಡಿದ್ದರೆ, ಮಾವ ನಾರಾಯಣ ಎಂಬವರು ಅಕಾಲಿಕ ಮರಣ ಹೊಂದಿದ್ದರು. ಬೆನ್ನು ಬೆನ್ನಿಗೆ ಮೂವರ ಆಸ್ಪತ್ರೆ ಖರ್ಚಿಗಾಗಿ ಮನೆಯವರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ಈಗ ಮತ್ತೊಬ್ಬ ಕುಡಿ ಸಾವು ಕಂಡಿದ್ದು ಕುಟುಂಬ ದಿಕ್ಕೆಟ್ಟು ಹೋಗಿದೆ. ಈ ಬಗ್ಗೆ ಯಾರಾದರೂ ದಾನಿಗಳು ಸಹಾಯ ಮಾಡುವುದಿದ್ದರೆ ಸಹಾಯ ಆದೀತು ಎಂದು ಅಲ್ಲಿನ ಸ್ಥಳೀಯರು ಕೇಳಿಕೊಂಡಿದ್ದಾರೆ.
Mangalore 19 year old boy dies of Heart Attack, family donates eyes. The deceased has been identified as Shashank from Belthangady.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm