ಬ್ರೇಕಿಂಗ್ ನ್ಯೂಸ್
29-01-22 11:19 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.29 : ಜ್ವರ, ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 19 ವರ್ಷದ ಹುಡುಗನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದು ಆತನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್ (19) ಮೃತ ಹುಡುಗ. ಈತನಿಗೆ ಎರಡು ದಿನಗಳ ಹಿಂದೆ ಜ್ವರ ಮತ್ತು ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಶಿರ್ತಾಡಿಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ, ಹೃದಯದ ಬಡಿತದಲ್ಲಿ ಅಸಮತೋಲನ ಇರುವ ಬಗ್ಗೆ ಹೇಳಿದ್ದರು. ಶುಕ್ರವಾರ ಸಂಜೆ ಮಂಗಳೂರಿನ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿದಾಗ ಹಾರ್ಟ್ ಬೀಟ್ ಹೆಚ್ಚಿರುವುದು ಮತ್ತು ಸಮಸ್ಯೆ ಇರುವುದು ಕಂಡುಬಂದಿದ್ದು ಕೂಡಲೇ ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಶಶಾಂಕ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹೀಗಾಗಿ ವೈದ್ಯರ ಕೋರಿಕೆಯಂತೆ ಮನೆಯವರು ಹುಡುಗನ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮನೆಯವರ ಪರಿಸ್ಥಿತಿ ನೋಡಿ ಆಸ್ಪತ್ರೆಯ ವೈದ್ಯರು ಬಿಲ್ ಕಡಿತ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಶಶಾಂಕ್, ಕೊಕ್ರಾಡಿ ಗ್ರಾಮದ ಸುಂದರ ಎಂಬವರ ಮಗನಾಗಿದ್ದು ಮೂವರು ಮಕ್ಕಳಲ್ಲಿ ಕಿರಿಯವ. ಬಡ ಕುಟುಂಬವಾಗಿದ್ದು ಇಬ್ಬರು ಅಕ್ಕಂದಿರು. ಮನೆಯಲ್ಲಿ ಬಡತನದ ಕಾರಣ ಸಣ್ಣ ವಯಸ್ಸಿನಲ್ಲೇ ಕೆಲಸಕ್ಕೆ ಹೋಗಲು ಆರಂಭಿಸಿದ್ದ. ಆದರೆ ವಿಧಿ ಕೈಕೊಟ್ಟಿದ್ದು ಸಣ್ಣ ವಯಸ್ಸಿನಲ್ಲೇ ಹುಡುಗನ ಪ್ರಾಣ ಕಸಿದಿದೆ.
ವಿಶೇಷ ಅಂದರೆ, ಶಶಾಂಕನ ಕುಟುಂಬದಲ್ಲಿ ಕಳೆದ ಎರಡು - ಮೂರು ವರ್ಷಗಳ ಅಂತರದಲ್ಲಿ ನಾಲ್ವರು ಸಾವು ಕಂಡಿದ್ದಾರೆ. ಅಜ್ಜ , ಅಜ್ಜಿ ಕ್ಯಾನ್ಸರ್ ಮತ್ತು ಹೃದಯಾಘಾತದಿಂದ ಸಾವು ಕಂಡಿದ್ದರೆ, ಮಾವ ನಾರಾಯಣ ಎಂಬವರು ಅಕಾಲಿಕ ಮರಣ ಹೊಂದಿದ್ದರು. ಬೆನ್ನು ಬೆನ್ನಿಗೆ ಮೂವರ ಆಸ್ಪತ್ರೆ ಖರ್ಚಿಗಾಗಿ ಮನೆಯವರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ಈಗ ಮತ್ತೊಬ್ಬ ಕುಡಿ ಸಾವು ಕಂಡಿದ್ದು ಕುಟುಂಬ ದಿಕ್ಕೆಟ್ಟು ಹೋಗಿದೆ. ಈ ಬಗ್ಗೆ ಯಾರಾದರೂ ದಾನಿಗಳು ಸಹಾಯ ಮಾಡುವುದಿದ್ದರೆ ಸಹಾಯ ಆದೀತು ಎಂದು ಅಲ್ಲಿನ ಸ್ಥಳೀಯರು ಕೇಳಿಕೊಂಡಿದ್ದಾರೆ.
Mangalore 19 year old boy dies of Heart Attack, family donates eyes. The deceased has been identified as Shashank from Belthangady.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm