ಬ್ರೇಕಿಂಗ್ ನ್ಯೂಸ್
29-01-22 11:19 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.29 : ಜ್ವರ, ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 19 ವರ್ಷದ ಹುಡುಗನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದು ಆತನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್ (19) ಮೃತ ಹುಡುಗ. ಈತನಿಗೆ ಎರಡು ದಿನಗಳ ಹಿಂದೆ ಜ್ವರ ಮತ್ತು ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಶಿರ್ತಾಡಿಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ, ಹೃದಯದ ಬಡಿತದಲ್ಲಿ ಅಸಮತೋಲನ ಇರುವ ಬಗ್ಗೆ ಹೇಳಿದ್ದರು. ಶುಕ್ರವಾರ ಸಂಜೆ ಮಂಗಳೂರಿನ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿದಾಗ ಹಾರ್ಟ್ ಬೀಟ್ ಹೆಚ್ಚಿರುವುದು ಮತ್ತು ಸಮಸ್ಯೆ ಇರುವುದು ಕಂಡುಬಂದಿದ್ದು ಕೂಡಲೇ ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಶಶಾಂಕ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹೀಗಾಗಿ ವೈದ್ಯರ ಕೋರಿಕೆಯಂತೆ ಮನೆಯವರು ಹುಡುಗನ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮನೆಯವರ ಪರಿಸ್ಥಿತಿ ನೋಡಿ ಆಸ್ಪತ್ರೆಯ ವೈದ್ಯರು ಬಿಲ್ ಕಡಿತ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಶಶಾಂಕ್, ಕೊಕ್ರಾಡಿ ಗ್ರಾಮದ ಸುಂದರ ಎಂಬವರ ಮಗನಾಗಿದ್ದು ಮೂವರು ಮಕ್ಕಳಲ್ಲಿ ಕಿರಿಯವ. ಬಡ ಕುಟುಂಬವಾಗಿದ್ದು ಇಬ್ಬರು ಅಕ್ಕಂದಿರು. ಮನೆಯಲ್ಲಿ ಬಡತನದ ಕಾರಣ ಸಣ್ಣ ವಯಸ್ಸಿನಲ್ಲೇ ಕೆಲಸಕ್ಕೆ ಹೋಗಲು ಆರಂಭಿಸಿದ್ದ. ಆದರೆ ವಿಧಿ ಕೈಕೊಟ್ಟಿದ್ದು ಸಣ್ಣ ವಯಸ್ಸಿನಲ್ಲೇ ಹುಡುಗನ ಪ್ರಾಣ ಕಸಿದಿದೆ.
ವಿಶೇಷ ಅಂದರೆ, ಶಶಾಂಕನ ಕುಟುಂಬದಲ್ಲಿ ಕಳೆದ ಎರಡು - ಮೂರು ವರ್ಷಗಳ ಅಂತರದಲ್ಲಿ ನಾಲ್ವರು ಸಾವು ಕಂಡಿದ್ದಾರೆ. ಅಜ್ಜ , ಅಜ್ಜಿ ಕ್ಯಾನ್ಸರ್ ಮತ್ತು ಹೃದಯಾಘಾತದಿಂದ ಸಾವು ಕಂಡಿದ್ದರೆ, ಮಾವ ನಾರಾಯಣ ಎಂಬವರು ಅಕಾಲಿಕ ಮರಣ ಹೊಂದಿದ್ದರು. ಬೆನ್ನು ಬೆನ್ನಿಗೆ ಮೂವರ ಆಸ್ಪತ್ರೆ ಖರ್ಚಿಗಾಗಿ ಮನೆಯವರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ಈಗ ಮತ್ತೊಬ್ಬ ಕುಡಿ ಸಾವು ಕಂಡಿದ್ದು ಕುಟುಂಬ ದಿಕ್ಕೆಟ್ಟು ಹೋಗಿದೆ. ಈ ಬಗ್ಗೆ ಯಾರಾದರೂ ದಾನಿಗಳು ಸಹಾಯ ಮಾಡುವುದಿದ್ದರೆ ಸಹಾಯ ಆದೀತು ಎಂದು ಅಲ್ಲಿನ ಸ್ಥಳೀಯರು ಕೇಳಿಕೊಂಡಿದ್ದಾರೆ.
Mangalore 19 year old boy dies of Heart Attack, family donates eyes. The deceased has been identified as Shashank from Belthangady.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm