ಬ್ರೇಕಿಂಗ್ ನ್ಯೂಸ್
30-01-22 02:00 pm Mangalore Correspondent ಕರಾವಳಿ
ಮಂಗಳೂರು, ಜ.30 : ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿಗೆ ಅಮಾನತು ಶಿಕ್ಷೆ ನೀಡಲಾಗಿದೆ.
ಫೇಸ್ಬುಕ್ ನಲ್ಲಿ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ತನಿಖೆ ನಡೆಸಿದ್ದು ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೇವೆ ನೀಡುತ್ತಿದ್ದ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿ ವಿಡಿಯೋ ಗೇಮ್ ಆಡುತ್ತಿದ್ದುದಾಗಿ ತಿಳಿದುಬಂದಿದೆ. ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವೆನ್ಲಾಕ್ ವೈದ್ಯಕೀಯ ಅಧೀಕ್ಷಕ ಸದಾಶಿವ ಶಾನುಭೋಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.23 ರಂದು ರಾತ್ರಿ 11 ಗಂಟೆಗೆ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ ಆಚಾರ್ಯ ಎಂಬ ವ್ಯಕ್ತಿಯನ್ನು ಕುಸಿದು ಬಿದ್ದು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಲ್ಲದೆ ಕಂಪ್ಯೂಟರ್ ನಲ್ಲಿ ವಿಡಿಯೋ ಗೇಮ್ ಆಡುತ್ತಾ ಸಮಯ ಕಳೆದಿದ್ದ ವಿಡಿಯೋ ವೈರಲ್ ಆಗಿತ್ತು. ರೋಗಿ ಚಿಂತಾಜನಕ ಸ್ಥಿತಿಯಲ್ಲಿದ್ದರೂ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ತೋರಿದ್ದರಿಂದ ವ್ಯಕ್ತಿಯ ಸ್ಥಿತಿ ಬಿಗಡಾಯಿಸಿತ್ತು. ಮುಂಜಾವಿನ ನಾಲ್ಕು ಗಂಟೆ ಸುಮಾರಿಗೆ ಅವರನ್ನು ಬಳಿಕ ಕಂಕನಾಡಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಂದಿನ ನಿರ್ಲಕ್ಷ್ಯದಿಂದಾಗಿ ರೋಗಿಯ ಸ್ಥಿತಿ ಇನ್ನೂ ಚೇತರಿಕೆ ಆಗಿಲ್ಲ. ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ವಿಜಯ ಕುಮಾರ್ ಸಂಬಂಧಿಕರು ತಿಳಿಸಿದ್ದಾರೆ.
A post graduate medical student of a private college was suspended from the college after he was found playing videogame when he was assigned for clinicals at Government Wenlock Hospital in Mangaluru. A video of him playing videogame had gone viral in social media.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm