ಬ್ರೇಕಿಂಗ್ ನ್ಯೂಸ್
30-01-22 05:44 pm Mangalore Correspondent ಕರಾವಳಿ
ಮಂಗಳೂರು, ಜ.30 : ಕರಾವಳಿ ಜಿಲ್ಲೆಗಳ ಏಕೈಕ ಅಲ್ಪಸಂಖ್ಯಾತ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರನ್ನು ಶಾಸಕಾಂಗ ಪಕ್ಷದ ಉಪ ನಾಯಕನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ಹಿರಿಯ ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ವರ್ಗದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವ ಹಿನ್ನೆಲೆಯಲ್ಲಿ ಮತ್ತೊಬ್ಬ ಅಲ್ಪಸಂಖ್ಯಾತ ಮುಖಂಡನನ್ನು ಪಕ್ಷದ ಮುಂಚೂಣಿ ಹುದ್ದೆಗೆ ನೇಮಕ ಮಾಡಲಾಗಿದೆ. ಮಂಗಳೂರು ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್, ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಮತ್ತು ಆಹಾರ ಸಚಿವರಾಗಿ ಗಮನ ಸೆಳೆದಿದ್ದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕನಾಗಿ ನೇಮಿಸಿ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆದೇಶ ಮಾಡಿದ್ದಾರೆ. ವಿಧಾನ ಪರಿಷತ್ ಸಭಾ ನಾಯಕನಾಗಿ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದಕ್ಕೆ ಮುನಿಸಿಕೊಂಡು ಸಿ.ಎಂ.ಇಬ್ರಾಹಿಂ ಪಕ್ಷ ಬಿಡುತ್ತಿದ್ದಾರೆ ಎನ್ನಲಾಗಿತ್ತು. ಸಿದ್ದರಾಮಯ್ಯ ನಂಬಿಕೊಂಡು ಪಕ್ಷಕ್ಕೆ ಬಂದೆ, ಈಗ ನನ್ನನ್ನು ಕಡೆಗಣಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅಲ್ಪಸಂಖ್ಯಾತರೇ ಶಕ್ತಿ. ಅವರಿಲ್ಲದೆ ಪಕ್ಷ ಇಲ್ಲ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಕಡೆಗಣಿಸಿದೆ ಅನ್ನುವ ಸಂದೇಶವನ್ನು ಸಿಎಂ ಇಬ್ರಾಹಿಂ ನೀಡಿದ್ದರು.
ಇಬ್ರಾಹಿಂ ಠಕ್ಕರ್ ಕೊಟ್ಟಿದ್ದಕ್ಕೆ ಮತ್ತೊಬ್ಬ ಪಕ್ಷ ನಿಷ್ಠ ಅಲ್ಪಸಂಖ್ಯಾತ ಮುಖಂಡನನ್ನು ಪಕ್ಷದ ಉನ್ನತ ಹುದ್ದೆಗೆ ಏರಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪ್ರತಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ಅವರೇ ಇದ್ದಾರೆ. ಈಗ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಉಪ ನಾಯಕನ ಸ್ಥಾನಕ್ಕೆ ಖಾದರ್ ಅವರನ್ನು ನೇಮಕ ಮಾಡಲಾಗಿದೆ. ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕಾಗಿ ಖಾದರ್ ಅವರಿಗೆ ಭಡ್ತಿ ನೀಡಲಾಗಿದೆ ಎನ್ನುವ ಮಾತು ಕೇಳಿಬಂದಿದೆ. ಕರಾವಳಿ ಮೂಲದವರೇ ಆಗಿರುವ ಬಿಕೆ ಹರಿಪ್ರಸಾದ್ ಅವರನ್ನು ಇತ್ತೀಚೆಗೆ ವಿಧಾನ ಪರಿಷತ್ ಸಭಾ ನಾಯಕರಾಗಿ ನೇಮಕ ಮಾಡಲಾಗಿತ್ತು.
The Congress high command has appointed former minister and current MLA U T Khader as the deputy leader of Congress Legislative party in Karnataka Assembly. An order to this effect was sent by K C Venugopal, general secretary of the party.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 03:42 pm
HK News Staffer
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm