ಬ್ರೇಕಿಂಗ್ ನ್ಯೂಸ್
30-01-22 05:44 pm Mangalore Correspondent ಕರಾವಳಿ
ಮಂಗಳೂರು, ಜ.30 : ಕರಾವಳಿ ಜಿಲ್ಲೆಗಳ ಏಕೈಕ ಅಲ್ಪಸಂಖ್ಯಾತ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರನ್ನು ಶಾಸಕಾಂಗ ಪಕ್ಷದ ಉಪ ನಾಯಕನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ಹಿರಿಯ ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ವರ್ಗದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವ ಹಿನ್ನೆಲೆಯಲ್ಲಿ ಮತ್ತೊಬ್ಬ ಅಲ್ಪಸಂಖ್ಯಾತ ಮುಖಂಡನನ್ನು ಪಕ್ಷದ ಮುಂಚೂಣಿ ಹುದ್ದೆಗೆ ನೇಮಕ ಮಾಡಲಾಗಿದೆ. ಮಂಗಳೂರು ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್, ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಮತ್ತು ಆಹಾರ ಸಚಿವರಾಗಿ ಗಮನ ಸೆಳೆದಿದ್ದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕನಾಗಿ ನೇಮಿಸಿ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆದೇಶ ಮಾಡಿದ್ದಾರೆ. ವಿಧಾನ ಪರಿಷತ್ ಸಭಾ ನಾಯಕನಾಗಿ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದಕ್ಕೆ ಮುನಿಸಿಕೊಂಡು ಸಿ.ಎಂ.ಇಬ್ರಾಹಿಂ ಪಕ್ಷ ಬಿಡುತ್ತಿದ್ದಾರೆ ಎನ್ನಲಾಗಿತ್ತು. ಸಿದ್ದರಾಮಯ್ಯ ನಂಬಿಕೊಂಡು ಪಕ್ಷಕ್ಕೆ ಬಂದೆ, ಈಗ ನನ್ನನ್ನು ಕಡೆಗಣಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅಲ್ಪಸಂಖ್ಯಾತರೇ ಶಕ್ತಿ. ಅವರಿಲ್ಲದೆ ಪಕ್ಷ ಇಲ್ಲ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಕಡೆಗಣಿಸಿದೆ ಅನ್ನುವ ಸಂದೇಶವನ್ನು ಸಿಎಂ ಇಬ್ರಾಹಿಂ ನೀಡಿದ್ದರು.
ಇಬ್ರಾಹಿಂ ಠಕ್ಕರ್ ಕೊಟ್ಟಿದ್ದಕ್ಕೆ ಮತ್ತೊಬ್ಬ ಪಕ್ಷ ನಿಷ್ಠ ಅಲ್ಪಸಂಖ್ಯಾತ ಮುಖಂಡನನ್ನು ಪಕ್ಷದ ಉನ್ನತ ಹುದ್ದೆಗೆ ಏರಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪ್ರತಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ಅವರೇ ಇದ್ದಾರೆ. ಈಗ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಉಪ ನಾಯಕನ ಸ್ಥಾನಕ್ಕೆ ಖಾದರ್ ಅವರನ್ನು ನೇಮಕ ಮಾಡಲಾಗಿದೆ. ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕಾಗಿ ಖಾದರ್ ಅವರಿಗೆ ಭಡ್ತಿ ನೀಡಲಾಗಿದೆ ಎನ್ನುವ ಮಾತು ಕೇಳಿಬಂದಿದೆ. ಕರಾವಳಿ ಮೂಲದವರೇ ಆಗಿರುವ ಬಿಕೆ ಹರಿಪ್ರಸಾದ್ ಅವರನ್ನು ಇತ್ತೀಚೆಗೆ ವಿಧಾನ ಪರಿಷತ್ ಸಭಾ ನಾಯಕರಾಗಿ ನೇಮಕ ಮಾಡಲಾಗಿತ್ತು.
The Congress high command has appointed former minister and current MLA U T Khader as the deputy leader of Congress Legislative party in Karnataka Assembly. An order to this effect was sent by K C Venugopal, general secretary of the party.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm