ಬ್ರೇಕಿಂಗ್ ನ್ಯೂಸ್
31-01-22 08:35 pm Mangalore Correspondent ಕರಾವಳಿ
ಮಂಗಳೂರು, ಜ.31 : ಅತ್ತ ಹಿರಿಯ ನಾಯಕ ಸಿಎಂ ಇಬ್ರಾಹಿಂ ಪಕ್ಷದಿಂದ ಹೊರ ನಡೆಯುವ ಸುಳಿವು ನೀಡಿರುವಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ ಆಗಿರುವ ಯುಟಿ.ಖಾದರ್, ತಮಗೆ ನೀಡಿರುವ ಹೊಸ ಜವಾಬ್ದಾರಿಗಾಗಿ ಹಿರಿಯ ನಾಯಕರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ, ಈ ಸ್ಥಾನ ತಾನು ಅಲ್ಪಸಂಖ್ಯಾತ ಅಥವಾ ಇಬ್ರಾಹಿಂ ಸ್ಥಾನ ತುಂಬುವುದಕ್ಕಾಗಿ ನೀಡಿದ್ದಲ್ಲ. ಅವರು ರಾಷ್ಟ್ರ ಮಟ್ಟದ ನಾಯಕರು. ಅವರಿಗೂ ನನಗೂ ಹೋಲಿಕೆ ಮಾಡಲಾಗದು. ಎಲ್ಲರಿಗೂ ಸಮಾನತೆ ಅನ್ನುವ ನೆಲೆಯಲ್ಲಿ ಖಾಲಿ ಇದ್ದ ಸ್ಥಾನಕ್ಕೆ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಖಾದರ್ ಹೇಳಿದ್ದಾರೆ.
ಸಿಎಂ ಇಬ್ರಾಹಿಂ ನಮ್ಮ ಪಕ್ಷದಲ್ಲೇ ಇದ್ದಾರೆ. ಕೆಲವೊಂದು ಅಸಮಾಧಾನ ಇದೆಯೆಂದು ಮಾತುಗಳನ್ನು ಹೇಳಿದ್ದಾರೆ. ಅದನ್ನು ನಮ್ಮ ಹೈಕಮಾಂಡ್ ಮಟ್ಟದ ನಾಯಕರು ನೋಡಿಕೊಳ್ಳುತ್ತಾರೆ. ನಾನು ಕೂಡ ಅವರ ಜೊತೆ ಮಾತನಾಡಿದ್ದೇನೆ. ನನ್ನಲ್ಲಿ ಏನೂ ಬೇರೆ ಪಕ್ಷಕ್ಕೆ ಹೋಗುವ ಬಗ್ಗೆ ಹೇಳಿಲ್ಲ. ಆಲಿಂಗ, ಅಹಿಂದ, ಅಗೌಡ ಹೀಗೆ ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವ ಇಂಥ ಚಳವಳಿ, ತತ್ವಗಳು ಕಾಂಗ್ರೆಸ್ ಒಳಗೇ ಇರುವಂಥದ್ದು. ಇಬ್ರಾಹಿಂ ಅವರ ಎಲ್ಲ ಯೋಚನೆಗಳು ಕಾಂಗ್ರೆಸ್ ಪಕ್ಷದ ವ್ಯಾಪ್ತಿಯಲ್ಲೇ ಇದೆ. ಅವರು ಪಕ್ಷ ಬಿಟ್ಟು ಹೋಗುವುದಿಲ್ಲ. ಪಕ್ಷದಲ್ಲೇ ಇರಲಿದ್ದಾರೆ.
ಕಾಂಗ್ರೆಸ್ ಎಲ್ಲರಿಗೂ ತಾರತಮ್ಯ ಇಲ್ಲದೆ ಅವಕಾಶಗಳನ್ನು ಕೊಟ್ಟಿದೆ. ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ, ಅದಕ್ಕೂ ಹಿಂದೆ ಎಸ್ಸೆಂ ಕೃಷ್ಣ ಸರಕಾರ ಇದ್ದಾಗ ಏಳು ಮಂದಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನದ ಅವಕಾಶ ಕೊಟ್ಟಿದ್ದರು. ಅಲ್ಪಸಂಖ್ಯಾತರಿಗೆ ಹೆಚ್ಚು ಅವಕಾಶ ಕೊಟ್ಟಿದ್ದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಪಕ್ಷ ಮುಂದೆಯೂ ಅವಕಾಶಗಳನ್ನು ಕೊಡಲಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಚರ್ಚಿಸಿ, ನನಗೆ ಈ ಸ್ಥಾನ ಕೊಡಿಸಿದ್ದಾರೆ. ಇದರ ಬಗ್ಗೆ ಯಾವುದೇ ಇತರ ಮುಖಂಡರಿಗೆ ಅಸಮಾಧಾನ ಇಲ್ಲ ಎಂದು ಖಾದರ್ ಹೇಳಿದರು.
ಇದು ಸ್ಥಾನಮಾನ ಅಂದ್ಕೊಳಲ್ಲ. ನನಗೆ ನೀಡಿರುವ ಜವಾಬ್ದಾರಿ ಅಂದುಕೊಳ್ಳುತ್ತೇನೆ. ಮಹತ್ತರ ಜವಾಬ್ದಾರಿಯನ್ನು ನನಗೆ ಪಕ್ಷ ಕೊಟ್ಟಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದು ಖಾದರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಶುಭೋದಯ ಆಳ್ವಾ, ಲುಕ್ಮಾನ್ ಬಂಟ್ವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Mangaluru MLA UT Khader on Monday claimed that his elevation to the post of deputy leader of opposition in the Karnataka assembly has nothing to do with the MLC CM Ibrahim issue.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm