ಬ್ರೇಕಿಂಗ್ ನ್ಯೂಸ್
01-02-22 08:58 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಫೆ.1 : ನಗರದ ಬಳ್ಳಾಲ್ ಬಾಗ್ ನಲ್ಲಿರುವ ಶ್ರೀದೇವಿ ಕಾಲೇಜು ಆವರಣದಲ್ಲಿ ಹುಡುಗರ ತಂಡವೊಂದು ಕ್ಯಾಂಪಸ್ ಒಳನುಗ್ಗಿ ತಲವಾರು ಹಿಡಿದು ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಬರ್ಕೆ ಠಾಣೆ ಮೆಟ್ಟಿಲೇರಿದೆ.
ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಘಟನೆ ನಡೆದಿದೆ. ಹುಡುಗರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಬಂದಿದ್ದು ಈ ವೇಳೆ ಕೇರಳ ಮೂಲದ ವಿದ್ಯಾರ್ಥಿಗಳಿಗೆ ವಾಹನ ತಾಗಿತ್ತು. ಇದರ ಬಗ್ಗೆ ಹುಡುಗರ ಗುಂಪು ಮತ್ತು ಮಲಯಾಳಿ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿತ್ತು. ಆದರೆ ಎರಡೂ ಕಡೆಯವರಿಗೆ ಭಾಷೆ ತಿಳಿಯದ ಕಾರಣ ಏನೇನೋ ಮಾತಾಡಿಕೊಂಡಿದ್ದರು. ಆನಂತರ ಅದೇ ಕಾಲೇಜಿನಲ್ಲಿ ಮಲಯಾಳಿ ವಿದ್ಯಾರ್ಥಿಗಳ ಸಹಪಾಠಿಯಾಗಿರುವ, ಮಂಗಳೂರಿನ ವಿದ್ಯಾರ್ಥಿಯೊಬ್ಬ ಅಲ್ಲಿಗೆ ಬಂದಿದ್ದು ಎರಡೂ ಗುಂಪಿನವರಿಗೆ ಬುದ್ಧಿಮಾತು ಹೇಳಿದ್ದಾನೆ. ಮಲಯಾಳ ಬಾರದ ಹುಡುಗರನ್ನು ಅಲ್ಲಿಂದ ಹೋಗುವಂತೆ ಹೇಳಿದ್ದ.

ಆದರೆ ಇದನ್ನೇ ನೆಪವಾಗಿರಿಸಿದ ಕಿಡಿಗೇಡಿ ಹುಡುಗರ ಗುಂಪು ಅಲ್ಲಿಂದ ಹಿಂತಿರುಗಿದ್ದು ಸ್ವಲ್ಪ ಹೊತ್ತಿನಲ್ಲಿ ಸ್ಥಳಕ್ಕೆ ತಲವಾರು ಹಿಡಿದು ಬಂದಿತ್ತು. ಐದಾರು ಮಂದಿ ಕಾಲೇಜು ಆವರಣಕ್ಕೆ ಬಂದು ಮಲಯಾಳಿಗಳು ಮತ್ತು ಇನ್ನೊಬ್ಬ ವಿದ್ಯಾರ್ಥಿಯನ್ನು ಹುಡುಕಾಟ ನಡೆಸಿದೆ. ತಲವಾರು ಹಿಡಿದು ಅತ್ತಿತ್ತ ಹೋಗಿದ್ದು, ಅಲ್ಲಿ ಮಲಯಾಳಿ ಹುಡುಗರಾಗಲೀ, ಬುದ್ಧಿಮಾತು ಹೇಳಿದ ವಿದ್ಯಾರ್ಥಿಯಾಗಲೀ ಸಿಕ್ಕಿರಲಿಲ್ಲ. ಹುಡುಗರು ಹೊರಗಿನವರಾಗಿದ್ದು, ಕಾಲೇಜಿಗೆ ಸಂಬಂಧಪಟ್ಟವರಲ್ಲ.

ಕಾಲೇಜು ಆವರಣದಲ್ಲಿ ತಲವಾರು ಹಿಡಿದು ಠಳಾಯಿಸಿದ ಹುಡುಗರ ವಿಡಿಯೋವನ್ನು ಕಾಲೇಜಿನ ವಿದ್ಯಾರ್ಥಿಗಳು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದು, ಅದೀಗ ವೈರಲ್ ಆಗಿದೆ. ಬರ್ಕೆ ಠಾಣೆಯಲ್ಲಿ ಸ್ಥಳೀಯ ವಿದ್ಯಾರ್ಥಿ ದೂರು ನೀಡಿದ್ದು, ತಲವಾರು ಹಿಡಿದು ಬಂದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾನೆ. ಎರಡೂ ಕಡೆಯ ಗುಂಪನ್ನು ಠಾಣೆಗೆ ಕರೆಸಿ, ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.
Youths enter with Talwar to college Sridevi campus in Ballabagh, Mangalore. The video of this has gone goes viral on social media.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm