ಬ್ರೇಕಿಂಗ್ ನ್ಯೂಸ್
01-02-22 08:58 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಫೆ.1 : ನಗರದ ಬಳ್ಳಾಲ್ ಬಾಗ್ ನಲ್ಲಿರುವ ಶ್ರೀದೇವಿ ಕಾಲೇಜು ಆವರಣದಲ್ಲಿ ಹುಡುಗರ ತಂಡವೊಂದು ಕ್ಯಾಂಪಸ್ ಒಳನುಗ್ಗಿ ತಲವಾರು ಹಿಡಿದು ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಬರ್ಕೆ ಠಾಣೆ ಮೆಟ್ಟಿಲೇರಿದೆ.
ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಘಟನೆ ನಡೆದಿದೆ. ಹುಡುಗರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಬಂದಿದ್ದು ಈ ವೇಳೆ ಕೇರಳ ಮೂಲದ ವಿದ್ಯಾರ್ಥಿಗಳಿಗೆ ವಾಹನ ತಾಗಿತ್ತು. ಇದರ ಬಗ್ಗೆ ಹುಡುಗರ ಗುಂಪು ಮತ್ತು ಮಲಯಾಳಿ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿತ್ತು. ಆದರೆ ಎರಡೂ ಕಡೆಯವರಿಗೆ ಭಾಷೆ ತಿಳಿಯದ ಕಾರಣ ಏನೇನೋ ಮಾತಾಡಿಕೊಂಡಿದ್ದರು. ಆನಂತರ ಅದೇ ಕಾಲೇಜಿನಲ್ಲಿ ಮಲಯಾಳಿ ವಿದ್ಯಾರ್ಥಿಗಳ ಸಹಪಾಠಿಯಾಗಿರುವ, ಮಂಗಳೂರಿನ ವಿದ್ಯಾರ್ಥಿಯೊಬ್ಬ ಅಲ್ಲಿಗೆ ಬಂದಿದ್ದು ಎರಡೂ ಗುಂಪಿನವರಿಗೆ ಬುದ್ಧಿಮಾತು ಹೇಳಿದ್ದಾನೆ. ಮಲಯಾಳ ಬಾರದ ಹುಡುಗರನ್ನು ಅಲ್ಲಿಂದ ಹೋಗುವಂತೆ ಹೇಳಿದ್ದ.

ಆದರೆ ಇದನ್ನೇ ನೆಪವಾಗಿರಿಸಿದ ಕಿಡಿಗೇಡಿ ಹುಡುಗರ ಗುಂಪು ಅಲ್ಲಿಂದ ಹಿಂತಿರುಗಿದ್ದು ಸ್ವಲ್ಪ ಹೊತ್ತಿನಲ್ಲಿ ಸ್ಥಳಕ್ಕೆ ತಲವಾರು ಹಿಡಿದು ಬಂದಿತ್ತು. ಐದಾರು ಮಂದಿ ಕಾಲೇಜು ಆವರಣಕ್ಕೆ ಬಂದು ಮಲಯಾಳಿಗಳು ಮತ್ತು ಇನ್ನೊಬ್ಬ ವಿದ್ಯಾರ್ಥಿಯನ್ನು ಹುಡುಕಾಟ ನಡೆಸಿದೆ. ತಲವಾರು ಹಿಡಿದು ಅತ್ತಿತ್ತ ಹೋಗಿದ್ದು, ಅಲ್ಲಿ ಮಲಯಾಳಿ ಹುಡುಗರಾಗಲೀ, ಬುದ್ಧಿಮಾತು ಹೇಳಿದ ವಿದ್ಯಾರ್ಥಿಯಾಗಲೀ ಸಿಕ್ಕಿರಲಿಲ್ಲ. ಹುಡುಗರು ಹೊರಗಿನವರಾಗಿದ್ದು, ಕಾಲೇಜಿಗೆ ಸಂಬಂಧಪಟ್ಟವರಲ್ಲ.

ಕಾಲೇಜು ಆವರಣದಲ್ಲಿ ತಲವಾರು ಹಿಡಿದು ಠಳಾಯಿಸಿದ ಹುಡುಗರ ವಿಡಿಯೋವನ್ನು ಕಾಲೇಜಿನ ವಿದ್ಯಾರ್ಥಿಗಳು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದು, ಅದೀಗ ವೈರಲ್ ಆಗಿದೆ. ಬರ್ಕೆ ಠಾಣೆಯಲ್ಲಿ ಸ್ಥಳೀಯ ವಿದ್ಯಾರ್ಥಿ ದೂರು ನೀಡಿದ್ದು, ತಲವಾರು ಹಿಡಿದು ಬಂದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾನೆ. ಎರಡೂ ಕಡೆಯ ಗುಂಪನ್ನು ಠಾಣೆಗೆ ಕರೆಸಿ, ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.
Youths enter with Talwar to college Sridevi campus in Ballabagh, Mangalore. The video of this has gone goes viral on social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm