ಬ್ರೇಕಿಂಗ್ ನ್ಯೂಸ್
01-02-22 08:58 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಫೆ.1 : ನಗರದ ಬಳ್ಳಾಲ್ ಬಾಗ್ ನಲ್ಲಿರುವ ಶ್ರೀದೇವಿ ಕಾಲೇಜು ಆವರಣದಲ್ಲಿ ಹುಡುಗರ ತಂಡವೊಂದು ಕ್ಯಾಂಪಸ್ ಒಳನುಗ್ಗಿ ತಲವಾರು ಹಿಡಿದು ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಬರ್ಕೆ ಠಾಣೆ ಮೆಟ್ಟಿಲೇರಿದೆ.
ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಘಟನೆ ನಡೆದಿದೆ. ಹುಡುಗರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಬಂದಿದ್ದು ಈ ವೇಳೆ ಕೇರಳ ಮೂಲದ ವಿದ್ಯಾರ್ಥಿಗಳಿಗೆ ವಾಹನ ತಾಗಿತ್ತು. ಇದರ ಬಗ್ಗೆ ಹುಡುಗರ ಗುಂಪು ಮತ್ತು ಮಲಯಾಳಿ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿತ್ತು. ಆದರೆ ಎರಡೂ ಕಡೆಯವರಿಗೆ ಭಾಷೆ ತಿಳಿಯದ ಕಾರಣ ಏನೇನೋ ಮಾತಾಡಿಕೊಂಡಿದ್ದರು. ಆನಂತರ ಅದೇ ಕಾಲೇಜಿನಲ್ಲಿ ಮಲಯಾಳಿ ವಿದ್ಯಾರ್ಥಿಗಳ ಸಹಪಾಠಿಯಾಗಿರುವ, ಮಂಗಳೂರಿನ ವಿದ್ಯಾರ್ಥಿಯೊಬ್ಬ ಅಲ್ಲಿಗೆ ಬಂದಿದ್ದು ಎರಡೂ ಗುಂಪಿನವರಿಗೆ ಬುದ್ಧಿಮಾತು ಹೇಳಿದ್ದಾನೆ. ಮಲಯಾಳ ಬಾರದ ಹುಡುಗರನ್ನು ಅಲ್ಲಿಂದ ಹೋಗುವಂತೆ ಹೇಳಿದ್ದ.
ಆದರೆ ಇದನ್ನೇ ನೆಪವಾಗಿರಿಸಿದ ಕಿಡಿಗೇಡಿ ಹುಡುಗರ ಗುಂಪು ಅಲ್ಲಿಂದ ಹಿಂತಿರುಗಿದ್ದು ಸ್ವಲ್ಪ ಹೊತ್ತಿನಲ್ಲಿ ಸ್ಥಳಕ್ಕೆ ತಲವಾರು ಹಿಡಿದು ಬಂದಿತ್ತು. ಐದಾರು ಮಂದಿ ಕಾಲೇಜು ಆವರಣಕ್ಕೆ ಬಂದು ಮಲಯಾಳಿಗಳು ಮತ್ತು ಇನ್ನೊಬ್ಬ ವಿದ್ಯಾರ್ಥಿಯನ್ನು ಹುಡುಕಾಟ ನಡೆಸಿದೆ. ತಲವಾರು ಹಿಡಿದು ಅತ್ತಿತ್ತ ಹೋಗಿದ್ದು, ಅಲ್ಲಿ ಮಲಯಾಳಿ ಹುಡುಗರಾಗಲೀ, ಬುದ್ಧಿಮಾತು ಹೇಳಿದ ವಿದ್ಯಾರ್ಥಿಯಾಗಲೀ ಸಿಕ್ಕಿರಲಿಲ್ಲ. ಹುಡುಗರು ಹೊರಗಿನವರಾಗಿದ್ದು, ಕಾಲೇಜಿಗೆ ಸಂಬಂಧಪಟ್ಟವರಲ್ಲ.
ಕಾಲೇಜು ಆವರಣದಲ್ಲಿ ತಲವಾರು ಹಿಡಿದು ಠಳಾಯಿಸಿದ ಹುಡುಗರ ವಿಡಿಯೋವನ್ನು ಕಾಲೇಜಿನ ವಿದ್ಯಾರ್ಥಿಗಳು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದು, ಅದೀಗ ವೈರಲ್ ಆಗಿದೆ. ಬರ್ಕೆ ಠಾಣೆಯಲ್ಲಿ ಸ್ಥಳೀಯ ವಿದ್ಯಾರ್ಥಿ ದೂರು ನೀಡಿದ್ದು, ತಲವಾರು ಹಿಡಿದು ಬಂದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾನೆ. ಎರಡೂ ಕಡೆಯ ಗುಂಪನ್ನು ಠಾಣೆಗೆ ಕರೆಸಿ, ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.
Youths enter with Talwar to college Sridevi campus in Ballabagh, Mangalore. The video of this has gone goes viral on social media.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm