ಬ್ರೇಕಿಂಗ್ ನ್ಯೂಸ್
01-02-22 08:58 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಫೆ.1 : ನಗರದ ಬಳ್ಳಾಲ್ ಬಾಗ್ ನಲ್ಲಿರುವ ಶ್ರೀದೇವಿ ಕಾಲೇಜು ಆವರಣದಲ್ಲಿ ಹುಡುಗರ ತಂಡವೊಂದು ಕ್ಯಾಂಪಸ್ ಒಳನುಗ್ಗಿ ತಲವಾರು ಹಿಡಿದು ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಬರ್ಕೆ ಠಾಣೆ ಮೆಟ್ಟಿಲೇರಿದೆ.
ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಘಟನೆ ನಡೆದಿದೆ. ಹುಡುಗರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಬಂದಿದ್ದು ಈ ವೇಳೆ ಕೇರಳ ಮೂಲದ ವಿದ್ಯಾರ್ಥಿಗಳಿಗೆ ವಾಹನ ತಾಗಿತ್ತು. ಇದರ ಬಗ್ಗೆ ಹುಡುಗರ ಗುಂಪು ಮತ್ತು ಮಲಯಾಳಿ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿತ್ತು. ಆದರೆ ಎರಡೂ ಕಡೆಯವರಿಗೆ ಭಾಷೆ ತಿಳಿಯದ ಕಾರಣ ಏನೇನೋ ಮಾತಾಡಿಕೊಂಡಿದ್ದರು. ಆನಂತರ ಅದೇ ಕಾಲೇಜಿನಲ್ಲಿ ಮಲಯಾಳಿ ವಿದ್ಯಾರ್ಥಿಗಳ ಸಹಪಾಠಿಯಾಗಿರುವ, ಮಂಗಳೂರಿನ ವಿದ್ಯಾರ್ಥಿಯೊಬ್ಬ ಅಲ್ಲಿಗೆ ಬಂದಿದ್ದು ಎರಡೂ ಗುಂಪಿನವರಿಗೆ ಬುದ್ಧಿಮಾತು ಹೇಳಿದ್ದಾನೆ. ಮಲಯಾಳ ಬಾರದ ಹುಡುಗರನ್ನು ಅಲ್ಲಿಂದ ಹೋಗುವಂತೆ ಹೇಳಿದ್ದ.

ಆದರೆ ಇದನ್ನೇ ನೆಪವಾಗಿರಿಸಿದ ಕಿಡಿಗೇಡಿ ಹುಡುಗರ ಗುಂಪು ಅಲ್ಲಿಂದ ಹಿಂತಿರುಗಿದ್ದು ಸ್ವಲ್ಪ ಹೊತ್ತಿನಲ್ಲಿ ಸ್ಥಳಕ್ಕೆ ತಲವಾರು ಹಿಡಿದು ಬಂದಿತ್ತು. ಐದಾರು ಮಂದಿ ಕಾಲೇಜು ಆವರಣಕ್ಕೆ ಬಂದು ಮಲಯಾಳಿಗಳು ಮತ್ತು ಇನ್ನೊಬ್ಬ ವಿದ್ಯಾರ್ಥಿಯನ್ನು ಹುಡುಕಾಟ ನಡೆಸಿದೆ. ತಲವಾರು ಹಿಡಿದು ಅತ್ತಿತ್ತ ಹೋಗಿದ್ದು, ಅಲ್ಲಿ ಮಲಯಾಳಿ ಹುಡುಗರಾಗಲೀ, ಬುದ್ಧಿಮಾತು ಹೇಳಿದ ವಿದ್ಯಾರ್ಥಿಯಾಗಲೀ ಸಿಕ್ಕಿರಲಿಲ್ಲ. ಹುಡುಗರು ಹೊರಗಿನವರಾಗಿದ್ದು, ಕಾಲೇಜಿಗೆ ಸಂಬಂಧಪಟ್ಟವರಲ್ಲ.

ಕಾಲೇಜು ಆವರಣದಲ್ಲಿ ತಲವಾರು ಹಿಡಿದು ಠಳಾಯಿಸಿದ ಹುಡುಗರ ವಿಡಿಯೋವನ್ನು ಕಾಲೇಜಿನ ವಿದ್ಯಾರ್ಥಿಗಳು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದು, ಅದೀಗ ವೈರಲ್ ಆಗಿದೆ. ಬರ್ಕೆ ಠಾಣೆಯಲ್ಲಿ ಸ್ಥಳೀಯ ವಿದ್ಯಾರ್ಥಿ ದೂರು ನೀಡಿದ್ದು, ತಲವಾರು ಹಿಡಿದು ಬಂದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾನೆ. ಎರಡೂ ಕಡೆಯ ಗುಂಪನ್ನು ಠಾಣೆಗೆ ಕರೆಸಿ, ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.
Youths enter with Talwar to college Sridevi campus in Ballabagh, Mangalore. The video of this has gone goes viral on social media.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm