ಬ್ರೇಕಿಂಗ್ ನ್ಯೂಸ್
02-02-22 12:31 pm Mangalore Correspondent ಕರಾವಳಿ
ಮಂಗಳೂರು, ಫೆ.2 : ನೈಟ್ ಕರ್ಪ್ಯೂ ಜಾರಿಯಿಂದಾಗಿ ರದ್ದುಗೊಂಡಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಮತ್ತೆ ಆರಂಭಿಸಲು ಪ್ರಯತ್ನ ನಡೆದಿದೆ. ಈ ಬಗ್ಗೆ ಕಂಬಳ ಸಮಿತಿಯ ಪ್ರಮುಖರು ಸಭೆ ನಡೆಸಿದ್ದು ಉಳಿದಿರುವ ಕಂಬಳದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಿದ್ದಾರೆ.
ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ 2021-22ರ ಸಾಲಿನ ಕಂಬಳವನ್ನು ಕಳೆದ ಜನವರಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಕೊರೋನಾ ಕರ್ಫ್ಯೂ ತೆರವುಗೊಂಡ ಕಾರಣ ಕಂಬಳವನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸಭೆ ನಡೆಸಿ ಕಂಬಳದ ಪರಿಷ್ಕೃತ ದಿನಾಂಕಗಳನ್ನು ನಿಗದಿಪಡಿಸಿದೆ ಎಂದು ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಿಳಿಸಿದ್ದಾರೆ.

ಕಳೆದ ಡಿ.5ರಂದು ಕಂಬಳ ಸೀಸನ್ ಆರಂಭಗೊಂಡಿತ್ತು. ಹಳೆ ವೇಳಾಪಟ್ಟಿಯಂತೆ ಹೊಕ್ಕಾಡಿಗೋಳಿ, ಮೂಡುಬಿದಿರೆ, ಮಿಯ್ಯಾರ್, ಕಕ್ಕೆಪದವು, ಮುಲ್ಕಿಯಲ್ಲಿ ಕಂಬಳ ಈಗಾಗಲೇ ನಡೆದಿದ್ದು ಉಳಿದ ಕಡೆಯ ಕಂಬಳಗಳು ಬಾಕಿಯಾಗಿದ್ದವು. ಇದೀಗ ಜಿಲ್ಲಾಡಳಿತದ ಅನುಮತಿ ಪಡೆದು ಫೆಬ್ರವರಿ 5ರಿಂದ ಕಂಬಳ ಸೀಸನ್ ಆರಂಭಿಸಿದ್ದು ಮೊದಲ ಕಂಬಳ ಬಾರಾಡಿ ಬೀಡುವಿನಲ್ಲಿ ನಡೆಯಲಿದೆ. ಫೆ.13 ರಂದು ಅಡ್ವೆ ನಂದಿಕೂರು, 19ರಂದು ವಾಮಂಜೂರು ತಿರುವೈಲ್ ಕಂಬಳ, 26ಕ್ಕೆ ಐಕಳ ಬಾವ, ಮಾರ್ಚ್ 5ರಂದು ಪೈವಳಿಕೆ ಕಂಬಳ, 12 ರಂದು ಕಟಪಾಡಿ, 19 ರಂದು ಪುತ್ತೂರು ಕಂಬಳ, 26 ರಂದು ಮಂಗಳೂರಿನ ಬಂಗ್ರಕುಳೂರು, ಎಪ್ರಿಲ್ 2ರಂದು ಉಪ್ಪಿನಂಗಡಿ, 9 ರಂದು ಬಂಗಾಡಿ, ಎಪ್ರಿಲ್ 16 ರಂದು ವೇಣೂರು ಕಂಬಳದೊಂದಿಗೆ ಮುಕ್ತಾಯಗೊಳ್ಳಲಿದೆ.
ಕೊರೊನಾದಿಂದಾಗಿ ಈ ಬಾರಿ ಕಂಬಳ ಸೀಸನ್ ಮುಗಿದೇ ಹೋಯ್ತು ಎಂಬ ಮಾತುಗಳು ಕೇಳಿಬಂದಿದ್ದವು. ಕಂಬಳ ಅಭಿಮಾನಿಗಳು, ಕಂಬಳದ ಕೆಲಸಗಾರರು, ಮೂರು ಜಿಲ್ಲೆಗಳಲ್ಲಿ ಹರಡಿರುವ ನೂರಕ್ಕೂ ಹೆಚ್ಚು ಜೋಡಿ ಕೋಣಗಳ ಮಾಲೀಕರು ಮತ್ತು ಸಾವಿರಾರು ಕಾರ್ಮಿಕರು ನಿರಾಶೆಗೊಂಡಿದ್ದರು. ಆದರೆ ಕರ್ಫ್ಯೂ ತೆರವಾದೊಡನೆ ಕಂಬಳ ಸಮಿತಿ ಸಭೆ ಸೇರಿದ್ದು ವಿಳಂಬ ಮಾಡದೆ ಹಳೆಯ ರೀತಿಯಲ್ಲೇ ಶನಿವಾರ, ಭಾನುವಾರದ ಕಂಬಳವನ್ನು ಮತ್ತೆ ಆರಂಭಿಸಿದೆ.
With the lifting of the night curfew in the district, preparations are afoot to hold the remaining Kambalas. The Kambala Samithi has brought out the revised schedule for holding the remaining Kambalas.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm