ಬ್ರೇಕಿಂಗ್ ನ್ಯೂಸ್
02-02-22 12:31 pm Mangalore Correspondent ಕರಾವಳಿ
ಮಂಗಳೂರು, ಫೆ.2 : ನೈಟ್ ಕರ್ಪ್ಯೂ ಜಾರಿಯಿಂದಾಗಿ ರದ್ದುಗೊಂಡಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಮತ್ತೆ ಆರಂಭಿಸಲು ಪ್ರಯತ್ನ ನಡೆದಿದೆ. ಈ ಬಗ್ಗೆ ಕಂಬಳ ಸಮಿತಿಯ ಪ್ರಮುಖರು ಸಭೆ ನಡೆಸಿದ್ದು ಉಳಿದಿರುವ ಕಂಬಳದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಿದ್ದಾರೆ.
ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ 2021-22ರ ಸಾಲಿನ ಕಂಬಳವನ್ನು ಕಳೆದ ಜನವರಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಕೊರೋನಾ ಕರ್ಫ್ಯೂ ತೆರವುಗೊಂಡ ಕಾರಣ ಕಂಬಳವನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸಭೆ ನಡೆಸಿ ಕಂಬಳದ ಪರಿಷ್ಕೃತ ದಿನಾಂಕಗಳನ್ನು ನಿಗದಿಪಡಿಸಿದೆ ಎಂದು ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಿಳಿಸಿದ್ದಾರೆ.
ಕಳೆದ ಡಿ.5ರಂದು ಕಂಬಳ ಸೀಸನ್ ಆರಂಭಗೊಂಡಿತ್ತು. ಹಳೆ ವೇಳಾಪಟ್ಟಿಯಂತೆ ಹೊಕ್ಕಾಡಿಗೋಳಿ, ಮೂಡುಬಿದಿರೆ, ಮಿಯ್ಯಾರ್, ಕಕ್ಕೆಪದವು, ಮುಲ್ಕಿಯಲ್ಲಿ ಕಂಬಳ ಈಗಾಗಲೇ ನಡೆದಿದ್ದು ಉಳಿದ ಕಡೆಯ ಕಂಬಳಗಳು ಬಾಕಿಯಾಗಿದ್ದವು. ಇದೀಗ ಜಿಲ್ಲಾಡಳಿತದ ಅನುಮತಿ ಪಡೆದು ಫೆಬ್ರವರಿ 5ರಿಂದ ಕಂಬಳ ಸೀಸನ್ ಆರಂಭಿಸಿದ್ದು ಮೊದಲ ಕಂಬಳ ಬಾರಾಡಿ ಬೀಡುವಿನಲ್ಲಿ ನಡೆಯಲಿದೆ. ಫೆ.13 ರಂದು ಅಡ್ವೆ ನಂದಿಕೂರು, 19ರಂದು ವಾಮಂಜೂರು ತಿರುವೈಲ್ ಕಂಬಳ, 26ಕ್ಕೆ ಐಕಳ ಬಾವ, ಮಾರ್ಚ್ 5ರಂದು ಪೈವಳಿಕೆ ಕಂಬಳ, 12 ರಂದು ಕಟಪಾಡಿ, 19 ರಂದು ಪುತ್ತೂರು ಕಂಬಳ, 26 ರಂದು ಮಂಗಳೂರಿನ ಬಂಗ್ರಕುಳೂರು, ಎಪ್ರಿಲ್ 2ರಂದು ಉಪ್ಪಿನಂಗಡಿ, 9 ರಂದು ಬಂಗಾಡಿ, ಎಪ್ರಿಲ್ 16 ರಂದು ವೇಣೂರು ಕಂಬಳದೊಂದಿಗೆ ಮುಕ್ತಾಯಗೊಳ್ಳಲಿದೆ.
ಕೊರೊನಾದಿಂದಾಗಿ ಈ ಬಾರಿ ಕಂಬಳ ಸೀಸನ್ ಮುಗಿದೇ ಹೋಯ್ತು ಎಂಬ ಮಾತುಗಳು ಕೇಳಿಬಂದಿದ್ದವು. ಕಂಬಳ ಅಭಿಮಾನಿಗಳು, ಕಂಬಳದ ಕೆಲಸಗಾರರು, ಮೂರು ಜಿಲ್ಲೆಗಳಲ್ಲಿ ಹರಡಿರುವ ನೂರಕ್ಕೂ ಹೆಚ್ಚು ಜೋಡಿ ಕೋಣಗಳ ಮಾಲೀಕರು ಮತ್ತು ಸಾವಿರಾರು ಕಾರ್ಮಿಕರು ನಿರಾಶೆಗೊಂಡಿದ್ದರು. ಆದರೆ ಕರ್ಫ್ಯೂ ತೆರವಾದೊಡನೆ ಕಂಬಳ ಸಮಿತಿ ಸಭೆ ಸೇರಿದ್ದು ವಿಳಂಬ ಮಾಡದೆ ಹಳೆಯ ರೀತಿಯಲ್ಲೇ ಶನಿವಾರ, ಭಾನುವಾರದ ಕಂಬಳವನ್ನು ಮತ್ತೆ ಆರಂಭಿಸಿದೆ.
With the lifting of the night curfew in the district, preparations are afoot to hold the remaining Kambalas. The Kambala Samithi has brought out the revised schedule for holding the remaining Kambalas.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm