ಬ್ರೇಕಿಂಗ್ ನ್ಯೂಸ್
02-02-22 12:31 pm Mangalore Correspondent ಕರಾವಳಿ
ಮಂಗಳೂರು, ಫೆ.2 : ನೈಟ್ ಕರ್ಪ್ಯೂ ಜಾರಿಯಿಂದಾಗಿ ರದ್ದುಗೊಂಡಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಮತ್ತೆ ಆರಂಭಿಸಲು ಪ್ರಯತ್ನ ನಡೆದಿದೆ. ಈ ಬಗ್ಗೆ ಕಂಬಳ ಸಮಿತಿಯ ಪ್ರಮುಖರು ಸಭೆ ನಡೆಸಿದ್ದು ಉಳಿದಿರುವ ಕಂಬಳದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಿದ್ದಾರೆ.
ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ 2021-22ರ ಸಾಲಿನ ಕಂಬಳವನ್ನು ಕಳೆದ ಜನವರಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಕೊರೋನಾ ಕರ್ಫ್ಯೂ ತೆರವುಗೊಂಡ ಕಾರಣ ಕಂಬಳವನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸಭೆ ನಡೆಸಿ ಕಂಬಳದ ಪರಿಷ್ಕೃತ ದಿನಾಂಕಗಳನ್ನು ನಿಗದಿಪಡಿಸಿದೆ ಎಂದು ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಿಳಿಸಿದ್ದಾರೆ.

ಕಳೆದ ಡಿ.5ರಂದು ಕಂಬಳ ಸೀಸನ್ ಆರಂಭಗೊಂಡಿತ್ತು. ಹಳೆ ವೇಳಾಪಟ್ಟಿಯಂತೆ ಹೊಕ್ಕಾಡಿಗೋಳಿ, ಮೂಡುಬಿದಿರೆ, ಮಿಯ್ಯಾರ್, ಕಕ್ಕೆಪದವು, ಮುಲ್ಕಿಯಲ್ಲಿ ಕಂಬಳ ಈಗಾಗಲೇ ನಡೆದಿದ್ದು ಉಳಿದ ಕಡೆಯ ಕಂಬಳಗಳು ಬಾಕಿಯಾಗಿದ್ದವು. ಇದೀಗ ಜಿಲ್ಲಾಡಳಿತದ ಅನುಮತಿ ಪಡೆದು ಫೆಬ್ರವರಿ 5ರಿಂದ ಕಂಬಳ ಸೀಸನ್ ಆರಂಭಿಸಿದ್ದು ಮೊದಲ ಕಂಬಳ ಬಾರಾಡಿ ಬೀಡುವಿನಲ್ಲಿ ನಡೆಯಲಿದೆ. ಫೆ.13 ರಂದು ಅಡ್ವೆ ನಂದಿಕೂರು, 19ರಂದು ವಾಮಂಜೂರು ತಿರುವೈಲ್ ಕಂಬಳ, 26ಕ್ಕೆ ಐಕಳ ಬಾವ, ಮಾರ್ಚ್ 5ರಂದು ಪೈವಳಿಕೆ ಕಂಬಳ, 12 ರಂದು ಕಟಪಾಡಿ, 19 ರಂದು ಪುತ್ತೂರು ಕಂಬಳ, 26 ರಂದು ಮಂಗಳೂರಿನ ಬಂಗ್ರಕುಳೂರು, ಎಪ್ರಿಲ್ 2ರಂದು ಉಪ್ಪಿನಂಗಡಿ, 9 ರಂದು ಬಂಗಾಡಿ, ಎಪ್ರಿಲ್ 16 ರಂದು ವೇಣೂರು ಕಂಬಳದೊಂದಿಗೆ ಮುಕ್ತಾಯಗೊಳ್ಳಲಿದೆ.
ಕೊರೊನಾದಿಂದಾಗಿ ಈ ಬಾರಿ ಕಂಬಳ ಸೀಸನ್ ಮುಗಿದೇ ಹೋಯ್ತು ಎಂಬ ಮಾತುಗಳು ಕೇಳಿಬಂದಿದ್ದವು. ಕಂಬಳ ಅಭಿಮಾನಿಗಳು, ಕಂಬಳದ ಕೆಲಸಗಾರರು, ಮೂರು ಜಿಲ್ಲೆಗಳಲ್ಲಿ ಹರಡಿರುವ ನೂರಕ್ಕೂ ಹೆಚ್ಚು ಜೋಡಿ ಕೋಣಗಳ ಮಾಲೀಕರು ಮತ್ತು ಸಾವಿರಾರು ಕಾರ್ಮಿಕರು ನಿರಾಶೆಗೊಂಡಿದ್ದರು. ಆದರೆ ಕರ್ಫ್ಯೂ ತೆರವಾದೊಡನೆ ಕಂಬಳ ಸಮಿತಿ ಸಭೆ ಸೇರಿದ್ದು ವಿಳಂಬ ಮಾಡದೆ ಹಳೆಯ ರೀತಿಯಲ್ಲೇ ಶನಿವಾರ, ಭಾನುವಾರದ ಕಂಬಳವನ್ನು ಮತ್ತೆ ಆರಂಭಿಸಿದೆ.
With the lifting of the night curfew in the district, preparations are afoot to hold the remaining Kambalas. The Kambala Samithi has brought out the revised schedule for holding the remaining Kambalas.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm