ಬ್ರೇಕಿಂಗ್ ನ್ಯೂಸ್
17-09-20 05:15 pm Mangalore Reporter ಕರಾವಳಿ
ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್ಫೋರ್ಸ್ ರಚನೆ, ಎನ್ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು. ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm