ಬ್ರೇಕಿಂಗ್ ನ್ಯೂಸ್
17-09-20 05:15 pm Mangalore Reporter ಕರಾವಳಿ
ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್ಫೋರ್ಸ್ ರಚನೆ, ಎನ್ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು. ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am