ಬ್ರೇಕಿಂಗ್ ನ್ಯೂಸ್
17-09-20 05:15 pm Mangalore Reporter ಕರಾವಳಿ
ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್ಫೋರ್ಸ್ ರಚನೆ, ಎನ್ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು. ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am