ಬ್ರೇಕಿಂಗ್ ನ್ಯೂಸ್
03-02-22 07:14 pm HK Desk news ಕರಾವಳಿ
ಉಡುಪಿ, ಫೆ.3 : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಹಾಸ್ಟೆಲ್ ಒಳಗೆ ಒಯ್ಯಲು ಯತ್ನಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಮಣಿಪಾಲ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಕುಖ್ಯಾತಿ ಇರುವ ಪ್ರದೇಶ. ಅಲ್ಲಿನ ಎಂಐಟಿ ಕ್ಯಾಂಪಸ್ ಅಂದ್ರೆ ಹುಡುಗ- ಹುಡುಗಿಯರಿಗೆ ಭೇದವೇ ಇಲ್ಲದಷ್ಟು ನಂಟು, ತಾದಾತ್ಮ್ಯ ಬೆಳೆದಿದೆ. ಅಂಥ ಕ್ಯಾಂಪಸ್ ಒಳಗಿನಿಂದ ಸಿಸಿಟಿವಿ ದೃಶ್ಯಾವಳಿಯೊಂದು ಹೊರಬಂದಿದ್ದು ಅಲ್ಲಿನ ಹುಡುಗ- ಹುಡುಗಿಯರ ಸ್ಥಿತಿಗೆ ಕನ್ನಡಿ ಹಿಡಿಯುವಂತಿದೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಹುಡುಗರ ಹಾಸ್ಟೆಲ್ ಒಳಗೆ ದೊಡ್ಡ ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಒಯ್ಯಲು ಯತ್ನಿಸಿದ್ದಾನೆ. ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಚೆಕ್ ಮಾಡುತ್ತಿದ್ದರು. ಈ ಸಂದರ್ಭ ಟ್ರಾವೆಲ್ ಬ್ಯಾಗ್ ಎತ್ತಿಕೊಂಡು ಮುಂದೆ ಹೋಗಲು ಯುವಕ ಪ್ರಯತ್ನಿಸಿದ್ದು ಅತಿ ಭಾರದಿಂದ ನಲುಗಿದ್ದಾನೆ. ಬ್ಯಾಗ್ ಇಷ್ಟೊಂದು ಭಾರ ಇರುವ ಬಗ್ಗೆ ಸಂಶಯ ಬಂದು ಸೆಕ್ಯುರಿಟಿ ಸಿಬಂದಿ ಸೂಟ್ ಕೇಸ್ ತೆಗೆದು ನೋಡಿದ್ದಾರೆ.
ಸೂಟ್ ಕೇಸ್ ನೋಡಿದರೆ ಸೆಕ್ಯುರಿಟಿ ಸಿಬಂದಿ ತಮ್ಮ ಕಣ್ಣುಗಳನ್ನೇ ನಂಬದಾಗಿದ್ದಾರೆ. ಅದರ ಒಳಗಿಂದ ಯುವತಿ ಎದ್ದು ಬಂದಿದ್ದು ಅಲ್ಲಿಯೇ ಎದ್ದು ನಿಂತಿದ್ದಾಳೆ. ಜೊತೆಗಿದ್ದ ಹುಡುಗ ಗಾಬರಿಯಿಂದ ನಿಂತಲ್ಲೇ ನಿಂತು ಬಿಟ್ಟಿದ್ದ.
ಈ ಬಗ್ಗೆ ಮಣಿಪಾಲ ಪೊಲೀಸರಿಗೆ ಕೇಳಿದರೆ, ನಮಗೇನು ಈ ವಿಚಾರ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಓಡಾಡುತ್ತಿದ್ದು ಅಲ್ಲಿನ ಸಿಬಂದಿಯೇ ವಿದ್ಯಾರ್ಥಿಗಳ ಚಮತ್ಕಾರವನ್ನು ಸಿಸಿಟಿವಿಯಿಂದ ತೆಗೆದು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ.
ಆದರೆ ಈ ವಿಡಿಯೋವನ್ನು ಮಣಿಪಾಲದ ಭದ್ರತಾ ಸಿಬಂದಿ ನಿರಾಕರಿಸಿದ್ದಾರೆ. ಇದು ಮಣಿಪಾಲದ್ದಲ್ಲ. ಬೇರೆಲ್ಲಿಯದೋ ಹಳೆಯ ವಿಡಿಯೋ ಎಂದು ಹೇಳಿದ್ದಾರೆ. ಕೆಲವರ ಪ್ರಕಾರ, ಮಣಿಪಾಲದ ಹಳೇ ವಿಡಿಯೋ ಎನ್ನುತ್ತಿದ್ದಾರೆ.
Udupi Engineering student carries his girlfriend in suitcase enters hostel gets caught by security guard. The video of this has gone viral social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm